ಗಾಳಿಯಲ್ಲಿ ಗಿರ ಗಿರನೇ ಗಿರಕಿ ಹೊಡೆದ ಕಾಪ್ಟರ್: ಬಿಜೆಪಿ MP ಪ್ರಾಣಾಪಾಯದಿಂದ ಪಾರು

Published : Jun 30, 2019, 06:11 PM IST
ಗಾಳಿಯಲ್ಲಿ ಗಿರ ಗಿರನೇ ಗಿರಕಿ ಹೊಡೆದ ಕಾಪ್ಟರ್: ಬಿಜೆಪಿ MP ಪ್ರಾಣಾಪಾಯದಿಂದ ಪಾರು

ಸಾರಾಂಶ

ಬಿಜೆಪಿ ಸಂಸದರೊಬ್ಬರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ದಿಢೀರ್ ಗಿರ ಗಿರನೇ ಗಿರಕಿ ಹೊಡೆದು ಸೇಫ್ ಆಗಿ ಲ್ಯಾಂಡಿಂಗ್ ಆಗಿದ್ದು, ಕಾಪ್ಟರ್ ನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಜೈಪುರ್, [ಜೂ.30]: ರಾಜಸ್ಥಾನದ ಅಳ್ವಾರ್ ಪ್ರದೇಶದಲ್ಲಿ ಬಿಜೆಪಿ ಸಂಸದರೊಬ್ಬರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಲ್ಯಾಂಡಿಂಗ್​ ವೇಳೆ ಪೈಲಟ್ ನಿಯಂತ್ರಣ ತಪ್ಪಿ ಗಾಳಿಯಲ್ಲಿ ಗಿರಕಿ ಹೊಡೆದಿದೆ. 

ಅಳ್ವಾರ್​ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಬಾಲಕನಾಥ್​ ಪ್ರಯಾಣಿಸುತ್ತಿದ್ದ ಚಾಪರ್​ ಲ್ಯಾಂಡಿಂಗ್​ ವೇಳೆ ನಿಯಂತ್ರಣ ತಪ್ಪಿ ಗಿರಕಿ ಹೊಡೆದಿದೆ. ಲ್ಯಾಂಡ್​ ಮಾಡುವಾಗ ಜೋರಾಗಿ ಗಾಳಿ ಬೀಸುತ್ತಿದ್ದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. 

 ಸಂಸದರ ಸ್ವಾಗತಕ್ಕೆ ನೆರೆದಿದ್ದ ಕಾರ್ಯಕರ್ತರು ಹಾಗೂ ಚಾಪರ್​ ಒಳಗಿದ್ದ ಎಂಪಿ ಬಾಲಕನಾಥ್​ ಒಂದು ಕ್ಷಣ ಬೆಚ್ಚಿಬಿದ್ದಿದ್ದಾರೆ.  ಆದ್ರೆ ಸಮಯ ಪ್ರಜ್ಞೆ ಮೆರೆದ ಪೈಲಟ್,​ ಆ ಪ್ರದೇಶದಿಂದ ಚಾಪರ್​ ಅನ್ನ ನಿಧಾನವಾಗಿ ನಿಯಂತ್ರಣಕ್ಕೆ ತೆಗೆದುಕೊಂಡು  ಮೇಲೆ ತೆಗೆದುಕೊಂಡು ಹೋಗಿದ್ದಾನೆ. 

ಬಳಿಕ ಮತ್ತೆ  ನಿಧಾನವಾಗಿ ಅದೇ ಪ್ರದೇಶಕ್ಕೆ ತಂದು ಲ್ಯಾಂಡ್​ ಮಾಡಿದ್ದು, ಸಂಭವಿಸಬೇಕಿದ್ದ ಬಾರೀ ಅನಾಹುತವನ್ನು ತಪ್ಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉಡುಪಿ: 2 ಗಂಟೆ ಕಾದರೂ ಬರಲಿಲ್ಲ 108 ಆಂಬುಲೆನ್ಸ್‌, ಗೂಡ್ಸ್ ಟೆಂಪೋದಲ್ಲಿ ಸಾಗಿಸಿ ವೃದ್ಧನ ರಕ್ಷಣೆ!
Actor Dileep Case: ಖ್ಯಾತ ನಟಿ ಮೇಲಿನ ಅ*ತ್ಯಾಚಾರ ಆರೋಪ; 8 ವರ್ಷಗಳ ಹೋರಾಟ, ನಟ ದಿಲೀಪ್‌ಗೆ ನಿರಾಳ!