ಲೋಕಸಭೆ ಹಂಗಾಮಿ ಸ್ಪೀಕರ್ ಆಯ್ಕೆ: ಮನೇಕಾ ಗಾಂಧಿಗೆ ನಿರಾಸೆ..!

Published : Jun 11, 2019, 02:40 PM IST
ಲೋಕಸಭೆ ಹಂಗಾಮಿ ಸ್ಪೀಕರ್ ಆಯ್ಕೆ: ಮನೇಕಾ ಗಾಂಧಿಗೆ ನಿರಾಸೆ..!

ಸಾರಾಂಶ

ಮನೇಕಾ ಗಾಂಧಿಯವರನ್ನು ಮೋದಿ ಸಂಪುಟದಿಂದ ಹೊರಗಿಟ್ಟಾಗ, ಈ ಬಾರಿಯ ಸ್ಪೀಕರ್​ ಆಗಿ ಅವರನ್ನು ನೇಮಕ ಮಾಡಲಾಗುತ್ತದೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ ಈ ಊಹಾಪೋಹಕ್ಕೆ ಉತ್ತರ ಸಿಕ್ಕಿದ್ದು, ಮನೇಕಾ ಗಾಂಧಿಗೆ ಸ್ಪೀಕರ್ ಹುದ್ದೆ ಕೈತಪ್ಪಿದೆ.

ನವದೆಹಲಿ, (ಜೂನ್.11): 17ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಡಾ.ವೀರೇಂದ್ರ ಕುಮಾರ್ ಆಯ್ಕೆಯಾಗಿದ್ದಾರೆ.

ಮಧ್ಯ ಪ್ರದೇಶದ ಟಿಕಾಮ್ ಗಢ್ ನಿಂದ 7 ಬಾರಿ ಸಂಸದರಾಗಿ ಆಯ್ಕೆಯಾಗಿರುವ ವೀರೇಂದ್ರ ಕುಮಾರ್ ಅವರನ್ನು 17ನೇ ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆ ಮಾಡಲಾಗಿದೆ. 

ಈ ಹಿಂದಿನ ಎನ್ ಡಿಎ ಸರ್ಕಾರದಲ್ಲಿ ವೀರೇಂದ್ರ ಕುಮಾರ್ ಅವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ಅಲ್ಪ ಸಂಖ್ಯಾತರ ಖಾತೆಯ ರಾಜ್ಯ ಸಚಿವರಾಗಿಯೂ ಕರ್ತವ್ಯ ನಿರ್ವಹಿಸಿದ್ದರು.

ಮನೇಕಾ ಗಾಂಧಿಯವರನ್ನು ಸಂಪುಟದಿಂದ ಹೊರಗಿಟ್ಟಾಗ, ಈ ಬಾರಿಯ ಸ್ಪೀಕರ್​ ಆಗಿ ಅವರನ್ನು ನೇಮಕ ಮಾಡಲಾಗುತ್ತದೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ ಈ ಊಹಾಪೋಹಕ್ಕೆ ಉತ್ತರ ಸಿಕ್ಕಿದ್ದು, ಸ್ಪೀಕರ್​ ಸ್ಥಾನಕ್ಕೆ ವೀರೇಂದ್ರ ಕುಮಾರ್​ ಆಯ್ಕೆಯಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ರಾಜ್ಯದಲ್ಲಿ ರಾಜಕೀಯ ಹೊಲಸೆದ್ದು, ಎಲ್ಲ ಪಕ್ಷಗಳು ಗಬ್ಬೆದ್ದು ಹೋಗಿವೆ: ಕೆ.ಎಸ್.ಈಶ್ವರಪ್ಪ