ಆರ್‌ಸಿಗೆ ಕೇಂದ್ರ ಸರ್ಕಾರದ ಸಮಿತಿಯಲ್ಲಿ ಸ್ಥಾನ

Published : Nov 06, 2019, 10:56 AM ISTUpdated : Nov 06, 2019, 11:44 AM IST
ಆರ್‌ಸಿಗೆ ಕೇಂದ್ರ ಸರ್ಕಾರದ ಸಮಿತಿಯಲ್ಲಿ ಸ್ಥಾನ

ಸಾರಾಂಶ

ಮಾಲಿನ್ಯ ನಿಯಂತ್ರಣ, ಬೆಂಗಳೂರಿನ ಸಮಸ್ಯೆಗಳು ಸೇರಿ ಇನ್ನಿತರ ಕೆಲ ನಗರಗಳ ನಿರ್ದಿಷ್ಟಸಮಸ್ಯೆಗಳ ನಿವಾರಣೆಗೆ ಸಮಿತಿಯೊಂದನ್ನು ರೂಪಿಸಿದ್ದು, ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್‌ ಇದರಲ್ಲಿ ಸ್ಥಾನ ಪಡೆದಿದ್ದಾರೆ.

ನವದೆಹಲಿ [ನ.06]:  ದೆಹಲಿಯ ಮಾಲಿನ್ಯ ನಿಯಂತ್ರಣ, ಬೆಂಗಳೂರಿನ ಸಮಸ್ಯೆಗಳು ಸೇರಿ ಇನ್ನಿತರ ಕೆಲ ನಗರಗಳ ನಿರ್ದಿಷ್ಟಸಮಸ್ಯೆಗಳ ನಿವಾರಣೆಗೆ ಪ್ರಧಾನ ಮಂತ್ರಿ ಕಚೇರಿ ನೀತಿ ಆಯೋಗದ ಉಪ ಮುಖ್ಯಸ್ಥ ರಾಜೀವ್‌ ಕುಮಾರ್‌ ನೇತೃತ್ವದಲ್ಲಿ ಸಮಿತಿಯೊಂದನ್ನು ರೂಪಿಸಿದ್ದು, ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್‌ ಇದರಲ್ಲಿ ಸ್ಥಾನ ಪಡೆದಿದ್ದಾರೆ.

"

ಪ್ರಧಾನ ವೈಜ್ಞಾನಿಕ ಸಲಹೆಗಾರ ಕೆ ವಿಜಯ ರಾಘವನ್‌, ಹಾರ್ವರ್ಡ್‌ ಬ್ಯುಸಿನೆಸ್‌ ಸ್ಕೂಲ್ ನ ತರುಣ್‌ ಖನ್ನಾ ಮತ್ತು ಮೇಜರ್‌ ಜನರಲ್ ಮಾಧುರಿ ಕಾನಿಟ್ಕರ್‌ ಅವರು ಸಮಿತಿ ಸದಸ್ಯರಾಗಿದ್ದು, 2 ವಾರದೊಳಗೆ ತನ್ನ ವರದಿಯನ್ನು ಸಲ್ಲಿಸಬೇಕಿದೆ. 

ಬಾಲಕಿಯರ ರೇಪ್, ಆತ್ಮಹತ್ಯೆ ಪ್ರಕರಣ: ಸ್ಮೃತಿ ಮಧ್ಯಪ್ರವೇಶಕ್ಕೆ ಸಂಸದ ರಾಜೀವ್ ಆಗ್ರಹ...

ನವದೆಹಲಿ, ಬೆಂಗಳೂರು, ಹೈದರಾಬಾದ್‌ ಮತ್ತು ಪುಣೆ ನಗರಗಳ ಸಮಸ್ಯೆಗಳ ಬಗ್ಗೆ ಸುಮಾರು 40 ಸಂಶೋಧನಾ ಸಂಸ್ಥೆಗಳ ನಡುವೆ ಸಮನ್ವಯ ಕ್ರಮಗಳನ್ನು ಕೈಗೊಂಡು ಈ ನಗರಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಮಿತಿ ವರದಿ ನೀಡಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೋದಿ-ಪುಟಿನ್‌ ಸೆಲ್ಫಿ ತೋರಿಸಿ ಟ್ರಂಪ್‌ ವಿರುದ್ಧ ಸಂಸದೆಯ ಕಿಡಿ
ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ