ಆರ್‌ಸಿಗೆ ಕೇಂದ್ರ ಸರ್ಕಾರದ ಸಮಿತಿಯಲ್ಲಿ ಸ್ಥಾನ

By Kannadaprabha NewsFirst Published Nov 6, 2019, 10:56 AM IST
Highlights

ಮಾಲಿನ್ಯ ನಿಯಂತ್ರಣ, ಬೆಂಗಳೂರಿನ ಸಮಸ್ಯೆಗಳು ಸೇರಿ ಇನ್ನಿತರ ಕೆಲ ನಗರಗಳ ನಿರ್ದಿಷ್ಟಸಮಸ್ಯೆಗಳ ನಿವಾರಣೆಗೆ ಸಮಿತಿಯೊಂದನ್ನು ರೂಪಿಸಿದ್ದು, ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್‌ ಇದರಲ್ಲಿ ಸ್ಥಾನ ಪಡೆದಿದ್ದಾರೆ.

ನವದೆಹಲಿ [ನ.06]:  ದೆಹಲಿಯ ಮಾಲಿನ್ಯ ನಿಯಂತ್ರಣ, ಬೆಂಗಳೂರಿನ ಸಮಸ್ಯೆಗಳು ಸೇರಿ ಇನ್ನಿತರ ಕೆಲ ನಗರಗಳ ನಿರ್ದಿಷ್ಟಸಮಸ್ಯೆಗಳ ನಿವಾರಣೆಗೆ ಪ್ರಧಾನ ಮಂತ್ರಿ ಕಚೇರಿ ನೀತಿ ಆಯೋಗದ ಉಪ ಮುಖ್ಯಸ್ಥ ರಾಜೀವ್‌ ಕುಮಾರ್‌ ನೇತೃತ್ವದಲ್ಲಿ ಸಮಿತಿಯೊಂದನ್ನು ರೂಪಿಸಿದ್ದು, ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್‌ ಇದರಲ್ಲಿ ಸ್ಥಾನ ಪಡೆದಿದ್ದಾರೆ.

"

ಪ್ರಧಾನ ವೈಜ್ಞಾನಿಕ ಸಲಹೆಗಾರ ಕೆ ವಿಜಯ ರಾಘವನ್‌, ಹಾರ್ವರ್ಡ್‌ ಬ್ಯುಸಿನೆಸ್‌ ಸ್ಕೂಲ್ ನ ತರುಣ್‌ ಖನ್ನಾ ಮತ್ತು ಮೇಜರ್‌ ಜನರಲ್ ಮಾಧುರಿ ಕಾನಿಟ್ಕರ್‌ ಅವರು ಸಮಿತಿ ಸದಸ್ಯರಾಗಿದ್ದು, 2 ವಾರದೊಳಗೆ ತನ್ನ ವರದಿಯನ್ನು ಸಲ್ಲಿಸಬೇಕಿದೆ. 

ಬಾಲಕಿಯರ ರೇಪ್, ಆತ್ಮಹತ್ಯೆ ಪ್ರಕರಣ: ಸ್ಮೃತಿ ಮಧ್ಯಪ್ರವೇಶಕ್ಕೆ ಸಂಸದ ರಾಜೀವ್ ಆಗ್ರಹ...

ನವದೆಹಲಿ, ಬೆಂಗಳೂರು, ಹೈದರಾಬಾದ್‌ ಮತ್ತು ಪುಣೆ ನಗರಗಳ ಸಮಸ್ಯೆಗಳ ಬಗ್ಗೆ ಸುಮಾರು 40 ಸಂಶೋಧನಾ ಸಂಸ್ಥೆಗಳ ನಡುವೆ ಸಮನ್ವಯ ಕ್ರಮಗಳನ್ನು ಕೈಗೊಂಡು ಈ ನಗರಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಮಿತಿ ವರದಿ ನೀಡಲಿದೆ.

click me!