ಮುಸ್ಲಿಂ ವ್ಯಕ್ತಿಯ ಮೇಲಿನ ಹಲ್ಲೆ ಖಂಡಿಸಿದ ಬಿಜೆಪಿ ಸಂಸದ ಗಂಭೀರ್

By Web DeskFirst Published May 27, 2019, 3:52 PM IST
Highlights

ಲೋಕಸಭಾ ಚುನಾವಣೆ ಬಳಿಕ ಸಬ್ ಕಾ ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಎಂದು ಮೋದಿ ಘೋಷಿಸಿದ ಬೆನ್ನಲ್ಲೇ ರಾಷ್ಟ್ರರಾಜಧಾನಿ ನವದೆಹಲಿಯಲ್ಲೇ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆದಿದೆ. ಈ ಘಟನೆಯನ್ನು ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಕಟುವಾದ ಶಬ್ಧಗಳಿಂದ ಖಂಡಿಸಿದ್ದಾರೆ.  

ನವದೆಹಲಿ[ಮೇ.27]: ಗುರುಗ್ರಾಮದಲ್ಲಿ ಟೊಪ್ಪಿ ತೆಗೆ ಹಾಗೂ ಜೈ ಶ್ರೀ ರಾಮ್ ಹೇಳು ಎಂದು ಒತ್ತಾಯಿಸಿ ಮುಸ್ಲಿಂ ವ್ಯಕ್ತಿಯ ಮೇಲೆ ನಡೆಸಿದ ಪುಂಡರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಬಿಜೆಪಿ ಸಂಸದ ಗೌತಮ್ ಗಂಭೀರ್ ಒತ್ತಾಯಿಸಿದ್ದಾರೆ.

ಭರ್ಜರಿಯಾಗಿ ರಾಜಕೀಯ ಇನ್ನಿಂಗ್ಸ್ ಆರಂಭಿಸಿದ ಗಂಭೀರ್

ಇತ್ತೀಚೆಗಷ್ಟೇ ಪೂರ್ವದೆಹಲಿಯಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಜಯಬೇರಿ ಬಾರಿಸಿದ್ದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಗಂಭೀರ್, ನಮ್ಮದು ಜಾತ್ಯಾತೀತ ರಾಷ್ಟ್ರ. ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಟ್ವೀಟ್ ಮಾಡಿದ್ದಾರೆ. 

“In Gurugram Muslim man told to remove skullcap,chant Jai Shri Ram”.
It is deplorable. Exemplary action needed by Gurugram authorities. We are a secular nation where writes “ओ पालन हारे, निर्गुण और न्यारे” & gave us d song “अर्ज़ियाँ” in Delhi 6.

— Gautam Gambhir (@GautamGambhir)

ಮುಸ್ಲಿಂ ವ್ಯಕ್ತಿಗೆ ಟೊಪ್ಪಿ ತೆಗಿ, ಜೈ ಶ್ರೀರಾಮ್ ಹೇಳು ಎಂದು ಒತ್ತಾಯಿಸಿರುವುದು ನಿಜಕ್ಕೂ ಶೋಚನೀಯ ಸಂಗತಿ. ಈ ಘಟನೆಯಲ್ಲಿ ಭಾಗಿಯಾದರ ವಿರುದ್ಧ ಗುರುಗ್ರಾಮದ ಸಂಬಂಧಪಟ್ಟ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಜತೆಗೆ ಭಾರತವು ಜಾವೇದ್ ಅಖ್ತರ್ ಬರೆದ ಓ ಪಾಲನ್ ಹಾರೆ, ನಿರ್ಗುಣ್ ಔರ್ ನ್ಯಾರೇ ಎಂಬ ಪ್ರಾರ್ಥನೆ ಬರೆದ ಹಾಗೆಯೇ ರಾಕೇಶ್ ಓಂ ಪ್ರಕಾಶ್ ಮೆಹ್ರಾ ದಿಲ್ಲಿ 6 ಚಿತ್ರದಲ್ಲಿ ಅರ್ಜ್ಹಿಯಾ ಹಾಡನ್ನು ಬರೆದಿದ್ದನ್ನು ನೋಡಿದ್ದೇವೆ ಎಂದು ಹೇಳಿದ್ದಾರೆ.

ಗೌತಮ್ ಗಂಭೀರ್ ಮೂರ್ಖ-ನೂತನ ಸಂಸದನ ತಿವಿದ ಶಾಹಿದ್ ಆಫ್ರಿದಿ!

ಇನ್ನೊಂದು ಟ್ವೀಟ್’ನಲ್ಲಿ  ಜಾತ್ಯತೀತತೆ ಎಂದರೆ ಪ್ರಧಾನ ಮಂತ್ರಿ ನರೇಂದ್ರ ಮಂತ್ರಿ ಅವರ, ಸಬ್ ಕಾ ಸಾತ್ ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸವೇ ಆಗಿದೆ. ಈ ವಿಚಾರವನ್ನು ಬರೀ ಗುರುಗ್ರಾಮ ಘಟನೆಗೆ ಸೀಮಿತಗೊಳಿಸುತ್ತಿಲ್ಲ.  ಜಾತಿ-ಧರ್ಮದ ಆಧಾರದ ಮೇಲೆ ನಡೆಸಲಾಗುವ ದಬ್ಬಾಳಿಕೆಗಳಾಗುತ್ತಿರುವುದು ಶೋಚನೀಯವಾಗಿದೆ. ಭಾರತದ ಸತ್ವವು ಸಹಿಷ್ಣುತೆ ಹಾಗೂ ಸಹಬಾಳ್ವೆಯ ಆಧಾರದ ಮೇಲೆ ನಿಂತಿದೆ ಎಂದು ಹೇಳಿದ್ದಾರೆ.

My thoughts on secularism emanate from honourable PM Mr Modi’s mantra “सबका साथ, सबका विकास, सब का विश्वास”. I am not limiting myself to Gurugram incident alone, any oppression based on caste/religion is deplorable. Tolerance & inclusive growth is what idea of India is based on.

— Gautam Gambhir (@GautamGambhir)

ರಾಷ್ಟ್ರರಾಜಧಾನಿಯ ಸಮೀಪದಲ್ಲೇ 25 ವರ್ಷದ ಮುಸ್ಲಿಂ ವ್ಯಕ್ತಿಯು ನಮಾಝ್ ಮುಗಿಸಿ ವಾಪಾಸ್ ಆಗುವ ವೇಳೆ 5 ಜನರ ಗುಂಪು ಟೊಪ್ಪಿ ತೆಗೆಯಲು ಹಾಗೂ ಜೈ ಶ್ರೀರಾಮ್ ಎಂದು ಹೇಳಲು ಒತ್ತಾಯಿಸಿರುವುದಾಗಿ ಆರೋಪಿಸಿದ್ದಾರೆ. 
 

click me!