ಟ್ವಿಟರ್’ನಲ್ಲಿ ಮಂಗಳಾರತಿ ಮಾಡಿಸಿಕೊಂಡ ಬಿಜೆಪಿ ಸಂಸದ ಪರೇಶ್ ರಾವಲ್

Published : Sep 10, 2017, 04:51 PM ISTUpdated : Apr 11, 2018, 12:44 PM IST
ಟ್ವಿಟರ್’ನಲ್ಲಿ ಮಂಗಳಾರತಿ ಮಾಡಿಸಿಕೊಂಡ ಬಿಜೆಪಿ ಸಂಸದ ಪರೇಶ್ ರಾವಲ್

ಸಾರಾಂಶ

ನಟ ಹಾಗೂ ಬಿಜೆಪಿ ಸಂಸದನಾಗಿರುವ ಪರೇಶ್ ರಾವಲ್ ತಪ್ಪುಮಾಹಿತಿಯನ್ನು ಪೋಸ್ಟ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ತಪಾರಕಿಗೊಳಗಾಗಿದ್ದಾರೆ.

ನಟ ಹಾಗೂ ಬಿಜೆಪಿ ಸಂಸದನಾಗಿರುವ ಪರೇಶ್ ರಾವಲ್, ತಪ್ಪುಮಾಹಿತಿಯನ್ನು ಪೋಸ್ಟ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ತಪಾರಕಿಗೊಳಗಾಗಿದ್ದಾರೆ.

ಮುಂಬೈ ತಾಜ್ ಹೋಟೆಲ್ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮನಾದ ಬೆಂಗಳೂರಿನ ಮೇ. ಸಂದೀಪ್ ಉನ್ನಿಕೃಷ್ಣನ್ ಅವರಿಗೆ ಸರ್ಕಾರವು 21-ಕುಶಲ ತೋಪುಗಳ ಗೌರವವಂದನೆ ನೀಡಿರಲಿಲ್ಲವೆಂದು ಟ್ವೀಟಿಸಿದ್ದಾರೆ.

ಆದರೆ ಈ ಮಾಹಿತಿಯು ಸುಳ್ಳಾಗಿದ್ದು, ಮೇ. ಸಂದೀಪ್ ಅಂತ್ಯಕ್ರಿಯೆಯು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತ್ತು. ಅಲ್ಲದೇ, 2008ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಆಡಳಿತ ನಡೆಸುತ್ತಿತ್ತು, ಹಾಗೂ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದರು.

ಟ್ವಿಟರಿಗರು ದಾಳಿ ಆರಂಭಿಸುತ್ತಿದ್ದಂತೆ ತಪ್ಪಿನ ಅರಿವಾಗಿ ಪರೇಶ್ ರಾವಲ್, ತಪ್ಪಿನಿಂದಾಗಿ ‘Not’ ಎಂಬ ಪದ ಸೇರಿಕೊಂಡಿದೆ ಎಂದು ತೇಪೆ ಹಚ್ಚುತ್ತಾ ಕ್ಷಮೆಯಾಚಿಸಿದ್ದಾರೆ.

ಗೌರಿ ಲಂಕೇಶ್ ಹತ್ಯೆ ವಿಚಾರವಾಗಿ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ. ಸಕಲ ಸರ್ಕಾರಿ ಗೌರವಗಳೊಂದಿಗೆ  ಗೌರಿ ಅಂತ್ಯಸಂಸ್ಕಾರ ನಡೆದಿತ್ತು ಎಂಬುವುದು ಇಲ್ಲಿ ಗಮನಾರ್ಹ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!
ವೇದಿಕೆಯಲ್ಲಿ ವಧು ಸದ್ದಿಲ್ಲದೆ ಮಾಡಿದ ಅದೊಂದು ಕೆಲಸ ಇಂಟರ್‌ನೆಟ್‌ನಲ್ಲಿ ಫುಲ್ ವೈರಲ್ ಆಯ್ತು..