
ಬೆಂಗಳೂರು, (ನ.12): ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಎಚ್.ಎನ್. ಅನಂತ ಕುಮಾರ್ ಅವರ ನಿಧನಕ್ಕೆ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಕಂಬನಿ ಮಿಡಿದಿದ್ದಾರೆ.
ರಾಜಕೀಯ ಸ್ನೇಹಿತ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ರಾಜೀವ್ ಚಂದ್ರಶೇಖರ್ ಅವರು ಇಂದು [ಸೋಮವಾರ] ಬೆಳಗ್ಗೆ ಅನಂತಕುಮಾರ್ ಅವರ ನಿವಾಸಕ್ಕೆ ದೌಡಾಯಿಸಿ ಗೆಳೆಯನ ಅಂತಿಮ ದರ್ಶನ ಪಡೆದರು.
Live Updates: ಕೇಂದ್ರ ಸಚಿವ ಅನಂತ ಕುಮಾರ್ ಇನ್ನಿಲ್ಲ
ನನ್ನ ಸಹೋದರ, ನನ್ನ ಸ್ನೇಹಿತ, ನನ್ನ ಸಲಹೆಗಾರ ಅನಂಕುಮಾರ್ ನಮ್ಮನ್ನು ಅಗಲಿದ್ದು, ಅವರು ನನಗೆ ಕುಟುಂಬವಾಗಿದ್ದರು. ನನ್ನ ರಾಜಕೀಯದಲ್ಲಿ ಆಪ್ತ ಸ್ನೇಹಿತರಲ್ಲಿ ಅವರು ಒಬ್ಬರಾಗಿದ್ದರು ಎಂದು ಟ್ವೀಟ್ ಮೂಲಕ ರಾಜೀವ್ ಚಂದ್ರಶೇಖರ್ ಅವರು ಅಗಲಿದೆ ಸ್ನೇಹಿತನಿಗೆ ಸಂತಾಪ ಸೂಚಿಸಿದ್ದಾರೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.