ಶ್ರೀರಾಮಗೆ ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿ ಮನೆ ಕೊಡಿ: ಬಿಜೆಪಿ ಸಂಸದ

Published : Dec 29, 2018, 11:21 AM IST
ಶ್ರೀರಾಮಗೆ ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿ ಮನೆ ಕೊಡಿ: ಬಿಜೆಪಿ ಸಂಸದ

ಸಾರಾಂಶ

 ‘ರಾಮ ಲಲ್ಲಾ’(ರಾಮನ ವಿಗ್ರಹ)ನಿಗೆ ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿ ವಸತಿ ಸೌಲಭ್ಯ ಕಲ್ಪಿಸಿ ಕೊಡಬೇಕು ಎಂದು ಬಿಜೆಪಿ ಸಂಸದರೊಬ್ಬರು ಆಗ್ರಹಿಸಿದ್ದಾರೆ.

ನವದೆಹಲಿ[ಡಿ.29]: ಉತ್ತರ ಪ್ರದೇಶದ ವಿವಾದಿತ ಅಯೋಧ್ಯೆಯಲ್ಲಿ ಮೇಲ್ಛಾವಣಿ ಇಲ್ಲದ ಟೆಂಟ್‌ನಲ್ಲಿರುವ ‘ರಾಮ ಲಲ್ಲಾ’(ರಾಮನ ವಿಗ್ರಹ)ನಿಗೆ ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿ ವಸತಿ ಸೌಲಭ್ಯ ಕಲ್ಪಿಸಿಕೊಡಬೇಕು ಎಂದು ಆಡಳಿತಾರೂಢ ಪಕ್ಷದ ಸಂಸದ ಹರಿ ನಾರಾಯಣ ರಾಜ್‌ಭರ್‌ ಆಗ್ರಹಿಸಿದ್ದಾರೆ.

ಈ ಬಗ್ಗೆ ಶುಕ್ರವಾರ ಮಾತನಾಡಿದ ರಾಜ್‌ಭರ್‌ ಅವರು, ‘ವಸತಿ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ.

ಹಾಗೆಯೇ, ಟೆಂಟ್‌ನಲ್ಲಿ ತೀವ್ರ ಗಾಳಿ, ಮಳೆ ಮತ್ತು ಭಾರೀ ಬಿಸಿಲಿನಲ್ಲಿರುವ ರಾಮಲಲ್ಲಾಗೂ ಒಂದು ಮನೆ ಕಟ್ಟಿಸಿಕೊಡಬೇಕು,’ ಎಂದು ಆಗ್ರಹಿಸಿ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಪರ ಧ್ವನಿ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೆಳತಿಯ ತಡೆಯಲು ಕಾರಿನ ರೂಫ್‌ ಮೇಲೆ ಹತ್ತಿದ.. ಆದರೆ ಆಕೆಯ ಪ್ರಿಯಕರ ಆತನ ಮೇಲೆ ಕಾರು ಹತ್ತಿಸಿದ
IAS: ಭ್ರಷ್ಟ ವ್ಯವಸ್ಥೆ ನಿದ್ದೆಗೆಡಿಸಿದ ಭಾರತದ ಆ ಐರನ್ ಐಎಎಸ್' ಆಫೀಸರ್ಸ್; ಈ ಲಿಸ್ಟ್‌ನಲ್ಲಿದೆ ಒಂದು ಕನ್ನಡದ ಕಲಿ!