ರಾಹುಲ್ ಅತ್ಯಂತ ಅರ್ಹ ವ್ಯಕ್ತಿ : ಬಿಜೆಪಿ ಮುಖಂಡ ಶತ್ರುಘ್ನ ಸಿನ್ಹಾ

Published : Dec 17, 2017, 05:57 PM ISTUpdated : Apr 11, 2018, 01:06 PM IST
ರಾಹುಲ್ ಅತ್ಯಂತ ಅರ್ಹ ವ್ಯಕ್ತಿ : ಬಿಜೆಪಿ ಮುಖಂಡ ಶತ್ರುಘ್ನ ಸಿನ್ಹಾ

ಸಾರಾಂಶ

ಕಾಂಗ್ರೆಸ್’ನ  ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಾಹುಲ್ ಗಾಂಧಿ ಅವರಿಗೆ ಶುಭ ಹಾರೈಸಿ ನೂರ್ಕಾಲ ಬಾಳಲಿ ಎಂದು ಹೇಳುವ ಮೂಲಕ ಲ್ಲರಿಗೂ ಅಚ್ಚರಿಯನ್ನುಂಟು ಮಾಡಿದ್ದ ಬಿಜೆಪಿ ಎಂಪಿ ಶತ್ರುಘ್ನ ಸಿನ್ಹಾ ಇದೀಗ ಮತ್ತೆ ಎಲ್ಲರಿಗೂ ಅಚ್ಚರಿಯನ್ನುಂಟು ಮಾಡಿದ್ದಾರೆ.

ನವದೆಹಲಿ (ಡಿ.17): ಕಾಂಗ್ರೆಸ್’ನ  ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಾಹುಲ್ ಗಾಂಧಿ ಅವರಿಗೆ ಶುಭ ಹಾರೈಸಿ ನೂರ್ಕಾಲ ಬಾಳಲಿ ಎಂದು ಹೇಳುವ ಮೂಲಕ ಲ್ಲರಿಗೂ ಅಚ್ಚರಿಯನ್ನುಂಟು ಮಾಡಿದ್ದ ಬಿಜೆಪಿ ಎಂಪಿ ಶತ್ರುಘ್ನ ಸಿನ್ಹಾ ಇದೀಗ ಮತ್ತೆ ಎಲ್ಲರಿಗೂ ಅಚ್ಚರಿಯನ್ನುಂಟು ಮಾಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರಾದವರಲ್ಲಿ ರಾಹುಲ್ ಗಾಂಧಿ ಅತ್ಯಂತ ಅರ್ಹ ವ್ಯಕ್ತಿ  ಎಂದು ಹೇಳಿದ್ದಾರೆ.

ಅತ್ಯಂತ ನ್ಯಾಚುರಲ್ ಹಾಗೂ ಅರ್ಹವಾದ ವ್ಯಕ್ತಿತ್ವ ಹೊಂದಿ ಅಧ್ಯಕ್ಷ ರಾಹುಲ್ ಎಂದಿದ್ದು,  ದೇಶದ ನಿಜವಾದ ಸ್ಫೂರ್ತಿ, ಜೈ ಹಿಂದ್ ಎಂದು ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಪ್ರತಿಯಾಗಿ ಟ್ವೀಟ್ ಮಾಡಿದ ರಾಹುಲ್ ಗಾಂಧಿ ನಿಮ್ಮ ಶುಭ ಹಾರೈಕೆಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

ಇತ್ತೀಚೆಗೆ ಶತ್ರುಘ್ನ ಸಿನ್ಹಾ ಅವರು ಬಿಜೆಪಿ ವಿರುದ್ಧವೇ ವಾಗ್ದಾಳಿ ನಡೆಸುತ್ತಾ ಬಂದಿದ್ದಾರೆ. ಅಷ್ಟೇ ಅಲ್ಲದೇ ಗುಜರಾತ್ ಚುನಾವಣೆಯಲ್ಲಿ ಪಾಕ್ ಕೈವಾಡವಿದೆ ಎಂದು ಪ್ರಧಾನಿ ಹೇಳಿಕೆಗೂ ಕೂಡ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬನ್ನೇರುಘಟ್ಟದಲ್ಲಿ ಅಪರೂಪದ ಅತಿಥಿ, ಆಫ್ರಿಕಾದಿಂದ ಆಗಮಿಸಿದ ಕ್ಯಾಪುಚಿನ್ ಕೋತಿಗಳು!
ದೇಶದಲ್ಲಿ ದಯನೀಯ ಸ್ಥಿತಿಗಿಳಿದ ಅನ್ನದಾತ, ಸಾಲ ಮರುಪಾವತಿಸಲು ಕಿಡ್ನಿ ಮಾರಿದ ರೈತ!