ಸಿಎಂ ಕರೆದ ಸದನ ನಾಯಕರ ಸಭೆಯನ್ನು ಬಹಿಷ್ಕರಿಸಿದ ಬಿಜೆಪಿ

Published : Sep 21, 2016, 03:57 AM ISTUpdated : Apr 11, 2018, 01:02 PM IST
ಸಿಎಂ ಕರೆದ ಸದನ ನಾಯಕರ ಸಭೆಯನ್ನು ಬಹಿಷ್ಕರಿಸಿದ ಬಿಜೆಪಿ

ಸಾರಾಂಶ

ಬೆಂಗಳೂರು(ಸೆ. 21): ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಕರೆದಿರುವ ಸದನ ನಾಯಕರ ಸಭೆಯನ್ನು ಬಿಜೆಪಿ ಬಹಿಷ್ಕರಿಸಿದೆ. ಕಾವೇರಿಯ ಕಿಚ್ಚು ಜ್ವಾಲಾಮುಖಿಯಾಗುವ ಸ್ಥಿತಿ ಬಂದಿದ್ದರೂ ರಾಜ್ಯದ ರಾಜಕೀಯ ಪಕ್ಷಗಳು ಇನ್ನೂ ಪರಸ್ಪರ ಕೆಸರೆರಚಾಟದಲ್ಲೇ ನಿರತವಾಗಿರುವುದಕ್ಕೆ ಇದು ಸ್ಪಷ್ಟ ನಿದರ್ಶನವೆನಿಸಿದೆ. ಕಳೆದ ಬಾರಿ ಸಭೆಯಲ್ಲಿ ತಮಿಳುನಾಡಿಗೆ ನೀರು ಬಿಡಬಾರದು ಎಂದು ತಾವು ಹೇಳಿದ ಮಾತನ್ನು ಸರಕಾರ ಪಾಲಿಸಲಿಲ್ಲ. ತಾವು ಸರಕಾರಕ್ಕೆ ನೀಡುವ ಯಾವುದೇ ಸಲಹೆಗಳೂ ವ್ಯರ್ಥ. ತಮ್ಮ ಸಲಹೆಗಳನ್ನು ಸರಕಾರ ಗಣನೆಗೇ ತೆಗೆದುಕೊಳ್ಳುವುದಿಲ್ಲ. ಹೀಗಾಗಿ, ತಾವು ಸಭೆಗೆ ಹೋದರೆ ಯಾವ ಪ್ರಯೋಜನವೂ ಇಲ್ಲ ಎಂದು ಬಿಜೆಪಿ ಮುಖಂಡರು ಅಸಮಾಧಾನ ಹೊರಹಾಕಿದ್ದಾರೆ.

ರಾಜ್ಯ ಸರಕಾರಕ್ಕೆ ಸಲಹೆ ಕೊಡುವ ಬದಲು ಕೇಂದ್ರಕ್ಕೆ ಹೋಗಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಲು ಬಿಜೆಪಿ ಸಂಸದರು ನಿರ್ಧರಿಸಿದ್ದಾರೆಂಬ ಮಾತು ಕೇಳಿಬರುತ್ತಿದೆ. ಈ ನಿಟ್ಟಿನಲ್ಲಿ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಇಂದು ದೆಹಲಿಗೆ ತೆರಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದರೂ ಸೂರ್ಯವಂಶಿ ಕುಟುಂಬಕ್ಕೆ ಅಘಾತ, ಆರಕ್ಕೆ 6 ಸದಸ್ಯರಿಗೆ ಸೋಲು
ಬಿಡದಿ ಟೌನ್ ಶಿಪ್ ಜಿದ್ದಿನಿಂದ ಅನುಷ್ಠಾನ ಮಾಡುತ್ತಿಲ್ಲ: ಶಾಸಕ ಎಚ್.ಸಿ.ಬಾಲಕೃಷ್ಣ