ಬಿ.ಸಿ ಪಾಟೀಲ್ ಸೇರಿ 16 ಕಾಂಗ್ರೆಸಿಗರಿಗೆ ಬಿಜೆಪಿ ಆಫರ್

Published : Sep 17, 2018, 09:52 AM ISTUpdated : Sep 19, 2018, 09:27 AM IST
ಬಿ.ಸಿ ಪಾಟೀಲ್ ಸೇರಿ 16 ಕಾಂಗ್ರೆಸಿಗರಿಗೆ ಬಿಜೆಪಿ ಆಫರ್

ಸಾರಾಂಶ

ಆಪರೇಷನ್ ಕಮಲದ ಹೆಸರಲ್ಲಿ ಬಿ.ಸಿ.ಪಾಟೀಲ್, ರಹೀಮ್ ಸೇರಿದಂತೆ 15 ರಿಂದ 16 ಶಾಸಕರನ್ನು ಸಂಪರ್ಕಿಸಿದ್ದಾರೆ. ಆದರೂ ಅವರ ಬೇಳೆ ಬೇಯುತ್ತಿಲ್ಲವೆಂದು ಗೊತ್ತಾಗಿ ಸುಮ್ಮನಿದ್ದಾರೆ ಎಂದು ಬಿಜೆಪಿ ಆಪರೇಷನ್ ಕಮಲದ ವಿರುದ್ಧ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. 

ಕಲಬುರಗಿ/ಚವಡಾಪುರ: ‘ಆಪರೇಷನ್ ಕಮಲ’ದಲ್ಲಿ ಸಿ.ಪಿ.ಯೋಗೇಶ್ವರ್ ಒಬ್ಬರೇ ಅಲ್ಲ. ಹಲವರು ಭಾಗಿಯಾಗಿದ್ದಾರೆ ಎಂದು ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ. ಕೆ.ಶಿವಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಬಿಳಿಸಲು ಬಿಜೆಪಿಗರು ಬಹಳಷ್ಟು ಉತ್ಸುಕರಾಗಿದ್ದಾರೆ. 

ಆಪರೇಷನ್ ಕಮಲದ ಹೆಸರಲ್ಲಿ ಬಿ.ಸಿ.ಪಾಟೀಲ್, ರಹೀಮ್ ಸೇರಿದಂತೆ 15 ರಿಂದ 16 ಶಾಸಕರನ್ನು ಸಂಪರ್ಕಿಸಿದ್ದಾರೆ. ಆದರೂ ಅವರ ಬೇಳೆ ಬೇಯುತ್ತಿಲ್ಲವೆಂದು ಗೊತ್ತಾಗಿ ಸುಮ್ಮನಿದ್ದಾರೆ. ಅಲ್ಲದೆ ಸುಖಾ ಸುಮ್ಮನೆ ಆರೋಪ ಮಾಡಿ ಜನರಲ್ಲಿ ಗೊಂದಲ ಸೃಷ್ಟಿಸಿದ್ದಾರೆ. ಅರ್ಜಂಟಾಗಿ ಹೋದ್ರೆ ಅಪಘಾತವಾಗುವ ಸಾಧ್ಯತೆ ಇದೆ.

ಹೀಗಾಗಿ ನಮ್ಮ ಸಮ್ಮಿಶ್ರ ಸರ್ಕಾರ ನಿಧಾನವಾಗಿ ಹೋಗ್ತಿದೆ ಎಂದು ತಿಳಿಸಿದರು. ಇನ್ನೂ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ  ವಿದ್ಯಾಮಾನಗಳೆಲ್ಲ ಬಿಜೆಪಿಯವರ ಸೃಷ್ಟಿಯೇ ಹೊರತು ಇನ್ನೇನು ಇಲ್ಲ. ಸಮ್ಮಿಶ್ರ ಸರ್ಕಾರ ಉರುಳುವುದಿಲ್ಲ. ಸಿದ್ದರಾಮಯ್ಯರಿಂದ ಯಾವುದೇ ರಾಜಕೀಯ ಬದಲಾವಣೆಯಾಗುವುದಿಲ್ಲ. ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ನಡೆದುಕೊಳ್ಳುತ್ತೇವೆ ಎಂದು ಶಿವಕುಮಾರ್ ಅವರು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ!
ಬೆಂಗಳೂರಲ್ಲಿ ಇಂದು ಇನ್ನಷ್ಟು ಚಳಿ; ತಾಪಮಾನ ಕುಸಿತ, ಈ ಮೂರು ಜಿಲ್ಲೆಗಳಲ್ಲಿ ಶೀತ ಅಲೆ ಎಚ್ಚರಿಕೆ!