ಮತ್ತೆ ಟಿಪ್ಪು ವಿವಾದ : ಹೆಸರು ಬದಲಾವಣೆ ಪ್ರಸ್ತಾವನೆಗೆ ವಿರೋಧ

Published : Dec 11, 2018, 01:28 PM ISTUpdated : Dec 11, 2018, 01:29 PM IST
ಮತ್ತೆ ಟಿಪ್ಪು ವಿವಾದ : ಹೆಸರು ಬದಲಾವಣೆ ಪ್ರಸ್ತಾವನೆಗೆ ವಿರೋಧ

ಸಾರಾಂಶ

ಮತ್ತೊಮ್ಮೆ ಕರ್ನಾಟಕದಲ್ಲಿ ರಸ್ತೆ ಹಾಗೂ ಕ್ರಾಸ್ ಗಳ ಹೆಸರು ಬದಲಾವಣೆ ವಿಚಾರ ಗರಿಗೆದರಿದೆ. ಬೆಳ್ಳಹಳ್ಳಿ ಹ್ರಾಸ್ ಗೆ ಟಿಪ್ಪು ಹೆಸರಿಡುವ ಕೃಷ್ಣ ಭೈರೇಗೌಡ ಪ್ರಸ್ತಾವಣೆಗೆ ಬಿಜೆಪಿಯಿಂದ ವಿರೋಧ ವ್ಯಕ್ತವಾಗಿದೆ. 

ಬೆಂಗಳೂರು :  ಸಚಿವ ಕೃಷ್ಣ ಭೈರೇಗೌಡರ ಮನವಿಯಂತೆ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಜಕ್ಕೂರ್ ವಾರ್ಡ್ ಬೆಳ್ಳಹಳ್ಳಿ ಸರ್ಕಲ್ ಗೆ ಟಿಪ್ಪು ಸರ್ಕಲ್ ಎಂದು ನಾಮಕರಣ ಮಾಡಿದರೆ ಸಚಿವರ ಮನೆಗೆ ಮುತ್ತಿಗೆ ಹಾಕುವುದಾಗಿ  ಬಿಜೆಪಿ ಮುಖಂಡರು ಎಚ್ಚರಿಕೆ ನೀಡಿದ್ದಾರೆ. 

ಬೆಟ್ಟಹಳ್ಳಿ ಸರ್ಕಲ್ ಗೆ ಟಿಪ್ಪು ಹೆಸರು ನಾಮಕರಣ ವಿರೋಧಿಸಿ ಹಿಂದೂ ಜಾಗರಣ ವೇದಿಕೆ ಹಾಗೂ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದ್ದು, ಯಲಹಂಕ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿದರು.  ಈ ವೇಳೆ ಮಾತನಾಡಿದ ಬಿಜೆಪಿ ಮುಖಂಡ ಎ.ರವಿ ಹೆಸರು ಬದಲಾದಲ್ಲಿ ಸೂಕ್ತ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. 

ಬೆಳ್ಳಳ್ಳಿ ಸರ್ಕಲ್ ಅನ್ನು ಟಿಪ್ಪು ಸರ್ಕಲ್ ಎಂದು ಬದಲಾಯಿಸಲು ಸ್ಥಳೀಯ ಶಾಸಕ ಹಾಗೂ ಸಚಿವರಾಗಿರುವ ಕೃಷ್ಣ ಬೈರೇಗೌಡರು ಪಾಲಿಕೆಗೆ ಪತ್ರ ಬರೆದಿದ್ದಾರೆ. ಆದರೆ ವೋಟ್ ಬ್ಯಾಂಕಿಂಗ್ ಗೋಸ್ಕರ ಸಚಿವರು ಈ ರೀತಿ ಮಾಡುತ್ತಿದ್ದಾರೆ. 

ಹಿಂದೂ ವಿರೋಧಿ, ನರಹಂತಕ ಟಿಪ್ಪುವಿನ ಹೆಸರನ್ನು ಇಡುವ ಬದಲು ಹೆಬ್ಬಾಳ, ಯಲಹಂಕ ಅಭಿವೃದ್ಧಿಗೆ ಶ್ರಮಿಸಿದ ಬಿ.ಬಸವಲಿಂಗಪ್ಪ ಹೆಸರನ್ನು ನಾಮಕರಣ ಮಾಡಬೇಕೆಂದು ಪ್ರತಿಭಟನಾಕಾರರು ಈ ವೇಳೆ ಆಗ್ರಹಿಸಿದರು.
  
ಈಗಾಗಲೇ ಟಿಪ್ಪು ನಾಮಕರಣ ವಿಚಾರವಾಗಿ ಫ್ಲೆಕ್ಸ್ ಹಾಕಿರುವುದನ್ನೂ ವಿರೋಧಿಸಿದ್ದು, ಸ್ಥಳೀಯ ಶಾಸಕ ಹಾಗೂ ಸಚಿವ ಕೃಷ್ಣ ಬೈರೇಗೌಡ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಈಗಾಗಲೇ ಅನೇಕ ರಸ್ತೆಗಳಿಗೆ ಹೆಸರು ಬದಲಾವಣೆಗೆ ಪ್ರಸ್ತಾಪವಿದ್ದು, ಸಾಕಷ್ಟು ರೀತಿಯಲ್ಲಿ ವಿರೋಧ ವ್ಯಕ್ತವಾಗಿದೆ. ಇದೀಗ ಈ ಸಾಲಿಗೆ ಬೆಳ್ಳಹಳ್ಳಿ ಕ್ರಾಸ್ ಕೂಡ ಸೇರಿದಂತಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ತಮಿಳು ಚಿತ್ರದಲ್ಲಿ ಕನ್ನಡ ಹಾಡು ಬಳಸಿದ್ದಕ್ಕೆ ದಂಡ, ಒಟಿಟಿ ರಿಲೀಸ್‌ಗೂ ಮುನ್ನ 30 ಲಕ್ಷ ಠೇವಣಿ ಇಡಿ ಎಂದ ಕೋರ್ಟ್‌!