25ಕ್ಕೆ ಕುವೆಂಪು ಸಮಾಧಿಗೆ ಅಮಿತ್‌ ಶಾ ಭೇಟಿ

Published : Mar 22, 2018, 11:18 AM ISTUpdated : Apr 11, 2018, 12:51 PM IST
25ಕ್ಕೆ ಕುವೆಂಪು ಸಮಾಧಿಗೆ ಅಮಿತ್‌ ಶಾ ಭೇಟಿ

ಸಾರಾಂಶ

ರಾಜ್ಯಕ್ಕೆ ಆಗಮಿಸುತ್ತಿರುವ ಬಿಜೆಪಿ ರಾಷ್ಟಾ್ರಧ್ಯಕ್ಷ ಅಮಿತ್‌ ಶಾ, ರಾಷ್ಟ್ರಕವಿ ಕುವೆಂಪು ಅವರ ಸಮಾಧಿ ಸ್ಥಳ ಕುಪ್ಪಳ್ಳಿಯ ಕವಿಶೈಲಕ್ಕೆ ಮಾ.25ರಂದು ಭೇಟಿ ನೀಡಲಿದ್ದಾರೆ.

ಶಿವಮೊಗ್ಗ: ರಾಜ್ಯಕ್ಕೆ ಆಗಮಿಸುತ್ತಿರುವ ಬಿಜೆಪಿ ರಾಷ್ಟಾ್ರಧ್ಯಕ್ಷ ಅಮಿತ್‌ ಶಾ, ರಾಷ್ಟ್ರಕವಿ ಕುವೆಂಪು ಅವರ ಸಮಾಧಿ ಸ್ಥಳ ಕುಪ್ಪಳ್ಳಿಯ ಕವಿಶೈಲಕ್ಕೆ ಮಾ.25ರಂದು ಭೇಟಿ ನೀಡಲಿದ್ದಾರೆ.

ಜಿಲ್ಲಾ ಬಿಜೆಪಿಯು ಅಮಿತ್‌ ಶಾ ಅವರು ಮಾ.26ರಂದು ಜಿಲ್ಲೆಗೆ ಭೇಟಿ ನೀಡುವುದು ಖಚಿತವಿತ್ತು. ಆದರೆ ಕವಿಶೈಲಕ್ಕೆ ಭೇಟಿ ನೀಡುವ ಬಗ್ಗೆ ಮಾಹಿತಿ ಇರಲಿಲ್ಲ. ಆದರೆ ಅಮಿತ್‌ ಶಾ ಕಾರ್ಯಕ್ರಮ ಪಟ್ಟಿಬಂದಾಗ ಕುಪ್ಪಳ್ಳಿಯೂ ಸೇರಿದ್ದು ಸ್ವತಃ ಸ್ಥಳೀಯ ಮುಖಂಡರಿಗೇ ಅಚ್ಚರಿ ಮೂಡಿಸಿದೆ.

ಕುಪ್ಪಳ್ಳಿಯಲ್ಲಿ ಕುವೆಂಪು ಪುತ್ರ ಪೂರ್ಣಚಂದ್ರ ತೇಜಸ್ವಿ ಅವರ ಸಮಾಧಿಯೂ ಇದೆ. ಚುನಾವಣಾ ಸಂದರ್ಭದಲ್ಲಿ ತಾವು ಇಡುವ ಪ್ರತಿಯೊಂದು ಹೆಜ್ಜೆಯೂ ಸಹ ಒಂದಿಷ್ಟಾದರೂ ಮತಗಳನ್ನು ಬಿಜೆಪಿಗೆ ತಂದುಕೊಡಬೇಕು ಎಂಬ ಚಾಣಾಕ್ಷತನ ಹೊಂದಿರುವ ಅಮಿತ್‌ ಶಾ ಅವರು ಕುವೆಂಪು ಅವರನ್ನು ಪ್ರಭಾವಿಸಿದ ಕುಪ್ಪಳ್ಳಿಗೆ ಭೇಟಿ ನೀಡುತ್ತಿರುವುದೂ ಇದೇ ಕಾರಣ ಎಂಬುದನ್ನು ಹಲವು ಬಿಜೆಪಿ ಮುಖಂಡರು ಖಚಿತಪಡಿಸುತ್ತಾರೆ. ಸಮಾಜವಾದಿ ನೆಲವಾಗಿದ್ದ ಶಿವಮೊಗ್ಗ ನಂತರ ಬಿಜೆಪಿ ಕೈವಶವಾದರೂ ಮತ್ತೆ ಕೈಬಿಟ್ಟಿತ್ತು. ಅದನ್ನು ಮರುವಶ ಮಾಡಿಕೊಳ್ಳಲು ತೀವ್ರ ಹಿಂದುತ್ವವಾದ ಎಂಬ ಹಣೆಪಟ್ಟಿಕಷ್ಟಸಾಧ್ಯ ಎಂಬ ವಿಶ್ಲೇಷಣೆಯ ಹಿನ್ನಲೆಯಲ್ಲಿ ಅಮಿತ್‌ ಶಾ ಅವರ ಕುಪ್ಪಳ್ಳಿ ಭೇಟಿ ಮಹತ್ವ ಪಡೆಯುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭೋಜಶಾಲಾ : ಹಿಂದು, ಮುಸ್ಲಿಂ ಧರ್ಮೀಯರಿಗೆ ಪ್ರಾರ್ಥನೆಗೆ ಅಸ್ತು
ಆಂಧ್ರದಲ್ಲೂ ಮಕ್ಕಳ ಸಾಮಾಜಿಕ ಮಾಧ್ಯಮ ಬಳಕೆಗೆ ನಿಷೇಧ?