ಶಾಸಕ ಪ್ರಸನ್ನಕುಮಾರ್ ಹೇಳಿಕೆಗೆ ಬಿಜೆಪಿ ಖಂಡನೆ

Published : Nov 12, 2017, 09:44 PM ISTUpdated : Apr 11, 2018, 01:07 PM IST
ಶಾಸಕ ಪ್ರಸನ್ನಕುಮಾರ್ ಹೇಳಿಕೆಗೆ ಬಿಜೆಪಿ ಖಂಡನೆ

ಸಾರಾಂಶ

ಸ್ವಾತಂತ್ರ್ಯ ಪೂರ್ವದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರು ರವಿಕೆಗಳನ್ನು ತೊಡುತ್ತಿರಲಿಲ್ಲ. ಅವರಿಗೆ ರವಿಕೆ ತೊಡುವುದನ್ನು ಹೇಳಿ ಕೊಟ್ಟದ್ದೇ ಟಿಪ್ಪು ಸುಲ್ತಾನ್ ಎಂದು ಶಾಸಕರು ಹೇಳಿದ್ದಾರೆ. ಈ ಹೇಳಿಕೆಯಿಂದ ಇಡೀ ಪರಿಶಿಷ್ಟ ಜಾತಿ ಹೆಣ್ಣುಮಕ್ಕಳಿಗೆ ಅವಮಾನ ಮತ್ತು ಅಗೌರವ ಮಾಡಿದಂತಾಗಿದೆ.

ಶಿವಮೊಗ್ಗ(ನ.12): ನಗರದಲ್ಲಿ ನಡೆದ ಟಿಪ್ಪು ಜಯಂತಿಯಲ್ಲಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರ ಗೌರವಕ್ಕೆ ಮಾನಹಾನಿ ಮಾಡಿ, ದಕ್ಕೆ ತಂದಿದ್ದು, ಎಸ್‌'ಸಿ, ಎಸ್‌'ಟಿ ದೌರ್ಜನ್ಯ ಕಾಯ್ದೆ ಅಡಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾದಿಂದ ಜಿಲ್ಲಾ ವರಿಷ್ಠಾಧಿಕಾರಿ ಅಭಿನವ ಖರೆ ಅವರಿಗೆ ಮನವಿ ಸಲ್ಲಿಸಲಾಯಿತು.

ನಗರದಲ್ಲಿ ಜಿಲ್ಲಾ ವರಿಷ್ಠಾಧಿಕಾರಿ ಅವರಿಗೆ ಮನವಿ ಸಲ್ಲಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದಿಂದ ಟಿಪ್ಪು ಸುಲ್ತಾನ್ ಜಯಂತಿಯನ್ನು ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರ ಘನತೆಗೆ ಮತ್ತು ಗೌರವಕ್ಕೆ ಚ್ಯುತಿ ತರುವಂತೆ ಮತ್ತು ಅವರ ಮಾನಹಾನಿ ಆಗುವಂತೆ ಮಾತನಾಡಿದ್ದಾರೆ ಎಂದು ಮನವಿಯಲ್ಲಿ ದೂರಿದ್ದಾರೆ.

ವ್ಯಕ್ತಿತ್ವ ತೇಜೋವಧೆ:

ಸ್ವಾತಂತ್ರ್ಯ ಪೂರ್ವದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರು ರವಿಕೆಗಳನ್ನು ತೊಡುತ್ತಿರಲಿಲ್ಲ. ಅವರಿಗೆ ರವಿಕೆ ತೊಡುವುದನ್ನು ಹೇಳಿ ಕೊಟ್ಟದ್ದೇ ಟಿಪ್ಪು ಸುಲ್ತಾನ್ ಎಂದು ಶಾಸಕರು ಹೇಳಿದ್ದಾರೆ. ಈ ಹೇಳಿಕೆಯಿಂದ ಇಡೀ ಪರಿಶಿಷ್ಟ ಜಾತಿ ಹೆಣ್ಣುಮಕ್ಕಳಿಗೆ ಅವಮಾನ ಮತ್ತು ಅಗೌರವ ಮಾಡಿದಂತಾಗಿದೆ. ಅವರ ಘನತೆಗೆ ಮತ್ತು ವ್ಯಕ್ತಿತ್ವಕ್ಕೆ ತೇಜೋವಧೆ ಮಾಡಿದ್ದಾರೆ. ಈ ಮೂಲಕ ಇಡೀ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹೆಣ್ಣು ಮಕ್ಕಳಿಗೆ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿದ ಅವರು, ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅವರ ಮೇಲೆ ಎಸ್‌ಸಿ-ಎಸ್‌ಟಿ ದೌರ್ಜನ್ಯ ಕಾಯ್ದೆಯಡಿ ಅವರನ್ನು ತಕ್ಷಣವೇ ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರಮುಖರಾದ ಎಸ್.ಎನ್. ಚನ್ನಬಸಪ್ಪ, ಕೆ.ಈ. ಕಾಂತೇಶ್, ನಾಗರಾಜ್, ಎಸ್. ಜ್ಞಾನೇಶ್ವರ್, ರಮೇಶ್, ಭವಾನಿ, ಹಿರಣ್ಣಯ್ಯ, ವಿಶ್ವಾಸ್, ಕೃಷ್ಣಪ ಸೇರಿದಂತೆ ಮತ್ತಿತರರು ಹಾಜರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಾಕ್ಸಿಕ್ ಸಿನಿಮಾ ರಿಲೀಸ್ ಸಮೀಪಿಸುತ್ತಿದ್ದಂತೆ ಐಟಿ ಪ್ರಕರಣದಲ್ಲಿ ನಟ ಯಶ್‌ಗೆ ಹೈಕೋರ್ಟ್ ರಿಲೀಫ್
ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ