
ಬೆಂಗಳೂರು (ಸೆ.26): ಕೆ.ಜೆ ಜಾರ್ಜ್ ರವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಂಡಿರುವುದನ್ನು ಭಾರತೀಯ ಜನತಾ ಪಕ್ಷ ಪ್ರಶ್ನಿಸಿದೆ.
ಪೋಲಿಸ್ ಅಧಿಕಾರಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಜಾರ್ಜ್ ಭಾಗಿಯಾಗಿಲ್ಲವೆಂದು ನ್ಯಾಯಾಲಯ ಇನ್ನೂ ತೀರ್ಪು ಕೊಟ್ಟಿಲ್ಲ. ಗಣಪತಿ ಆತ್ಮಹತ್ಯೆ ನಂತರ ನಡೆದಿರುವ ಎಲ್ಲಾ ಬೆಳವಣಿಗೆಗಳು ನಾಟಕೀಯವಾಗಿದೆ. ಸಿಐಡಿ ವರದಿ ಕೂಡಾ ಜಾರ್ಜ್ ಪ್ರಭಾವಿತವಾಗಿದೆ.
ಸಿಐಡಿ ತನ್ನ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆಯಷ್ಟೇ. ನ್ಯಾಯಾಲಯ ಇನ್ನೂ ತೀರ್ಪು ಕೊಟ್ಟಿಲ್ಲ. ಇಷ್ಟು ಆತುರಾತುರವಾಗಿ ಜಾರ್ಜ್’ರವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಅಗತ್ಯವೇನಿತ್ತು ಎಂದು ಬಿಜೆಪಿ ಮುಖಂಡ ಗೋ, ಮಧುಸೂದನ್ ಪ್ರಶ್ನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.