ಕರ್ನಾಟಕದ ಸಿಗಂ ವಿರುದ್ಧ ಬಿಜೆಪಿ ಗರಂ

Published : Nov 22, 2018, 12:05 PM IST
ಕರ್ನಾಟಕದ ಸಿಗಂ ವಿರುದ್ಧ ಬಿಜೆಪಿ ಗರಂ

ಸಾರಾಂಶ

ಕೇಂದ್ರ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದ ಕರ್ನಾಟಕದ ಐಪಿಎಸ್ ಅಧಿಕಾರಿ ವಿರುದ್ಧ ಬಿಜೆಪಿ ಗರಂ ಆಗಿದೆ. 

ಶಬರಿಮಲೆ :  2015ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೇರಳ ಭೇಟಿ ಸಂದರ್ಭದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಎಡರಂಗದ ಕಾರ್ಯಕರ್ತರ ಮೇಲೆ ಯತೀಶ್‌ ಚಂದ್ರ ಲಾಠಿ ಪ್ರಹಾರ ಮಾಡಿಸಿ ಗಮನ ಸೆಳೆದಿದ್ದರು. 

ಎಡರಂಗದ ಆಕ್ರೋಶಕ್ಕೂ ಗುರಿಯಾಗಿದ್ದರು. ಆ ಸಂದರ್ಭದಲ್ಲಿ ಯತೀಶ್‌ ನಡೆಯನ್ನು ಬಿಜೆಪಿ ಸಮರ್ಥಿಸಿಕೊಂಡಿತ್ತು. ಇದೀಗ ಬಿಜೆಪಿ ಸಚಿವರ ಜತೆ ಯತೀಶ್‌ ವಾಗ್ವಾದ ನಡೆಸಿರುವುದು ಆ ಪಕ್ಷದ ಕೆಂಗಣ್ಣಿಗೆ ಗುರಿಯಾಗಿದೆ. 

ಕಾಂಗ್ರೆಸ್ಸಿನ ರಮೇಶ್‌ ಚೆನ್ನಿತ್ತಲ ಶಬರಿಮಲೆಗೆ ಹೋದಾಗ ಯತೀಶ್‌ ಗುಲಾಮರಂತೆ ಕೆಲಸ ಮಾಡಿದ್ದರು ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಎ.ಎನ್‌. ರಾಧಾಕೃಷ್ಣನ್‌ ಟೀಕಿಸಿದ್ದಾರೆ. ಆದರೆ ಯತೀಶ್‌ ಅವರನ್ನು 2015ರಲ್ಲಿ ‘ಹುಚ್ಚು ನಾಯಿ’ ಎಂದಿದ್ದ ಎಡರಂಗ, ಇದೀಗ ಅವರ ಬಗ್ಗೆ ಹೊಗಳಿಕೆಯ ಮಾತುಗಳನ್ನು ಆಡುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು