ಭಾರತ್ ಬಂದ್ ಧಿಕ್ಕರಿಸಲು ಕರ್ನಾಟಕ ಬಿಜೆಪಿ ಕರೆ

Published : Jan 07, 2019, 09:20 PM IST
ಭಾರತ್ ಬಂದ್ ಧಿಕ್ಕರಿಸಲು ಕರ್ನಾಟಕ ಬಿಜೆಪಿ ಕರೆ

ಸಾರಾಂಶ

ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ, ಕಾರ್ಮಿಕರ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿ ಯು) ಬಂದ್ ಕರೆ ನೀಡಿದೆ. ಜನವರಿ 8 ಹಾಗೂ 9 ರಂದು ಎರಡು ದಿನಗಳ ಕಾಲ ಬಂದ್‌ಗೆ ಕರೆನೀಡಲಾಗಿದೆ. ಆದರೆ ರಾಜ್ಯ ಬಿಜೆಪಿ ಈ ಬಂದ್‌ಗೆ ಧಿಕ್ಕಾರ ಹೇಳಿದೆ.

ಬೆಂಗಳೂರು[ಜ.07] ಕಾರ್ಮಿಕ ಸಂಘಟನೆಗಳನ್ನು ದಿಕ್ಕು ತಪ್ಪಿಸುವ ಉದ್ದೇಶಕ್ಕೆ ಕರೆ ನೀಡಿರುವ ಬಂದ್‌ಗೆ ಯಾವುದೆ ಅರ್ಥವಿಲ್ಲ. ವಾಸ್ತವಿಕತೆಯಿಂದ ದೂರ ಇರುವ ಈ ಬಂದ್‌ನ್ನು ಧಿಕ್ಕರಿಸಬೇಕು ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಮನವಿ ಮಾಡಿದ್ದಾರೆ.

ನಿರುದ್ಯೋಗ, ಬೆಲೆ  ಏರಿಕೆ ಮತ್ತು ಕೇಂದ್ರ ಸರಕಾರದ ಆರ್ಥಿಕ ನೀತಿ ವಿರೋಧಿಸಿ ಕರೆನೀಡಿರುವ ಬಂದ್‌ಗೆ ಅರ್ಥವಿಲ್ಲ. ಕಳೆದ 4 ವರ್ಷದಲ್ಲಿ ಬೆಲೆ ನಿಯಂತ್ರಣದಲ್ಲಿದೆ. ಕಪೋ ಕಲ್ಪಿತ ಅಂಕಿ ಅಂಶಗಳ ಆಧಾರದಲ್ಲಿ ಬಂದ್‌ಗೆ ಕರೆ  ನೀಡಿರುವುದು ಖಂಡನೀಯ ಎಂದಿದ್ದಾರೆ.

ಜನವರಿ 8 - 9 ರಂದು ಭಾರತ್ ಬಂದ್ : ಏನಿರುತ್ತೆ..? ಏನಿರಲ್ಲ..?

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸರ್ಕಾರಿ ಉದ್ದಿಮೆಗಳ ಖಾಸಗೀಕರಣ 15 ವರ್ಷಗಳಿಂದ ನಡೆಯುತ್ತಿರುವ ಪ್ರಕ್ರಿಯೆ. ಇದನ್ನು ಮೋದಿ ಸರಕಾರ ಕೈಗೊಂಡಿಲ್ಲ.ಮುಂದಿನ ಲೋಕಸಭಾ ಚುನಾವಣೆ ಗಮನದಲ್ಲಿರಿಸಿ ರಾಜಕೀಯ ಲಾಭಕ್ಕಾಗಿ ಹಮ್ಮಿಕೊಂಡಿರುವ ಬಂದ್ ಧಿಕ್ಕರಿಸಬೇಕು ಎಂದು ಬಿಜೆಪಿ ಮನವಿ ಮಾಡಿದೆ.

ನಾಳೆ ಭಾರತ್ ಬಂದ್ : ಶಾಲಾ-ಕಾಲೇಜುಗಳಿಗೆ ಇರುತ್ತಾ ರಜೆ..?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ರೇಟರ್‌ ಬೆಂಗಳೂರು.. ವೈಜ್ಞಾನಿಕವಾಗಿ ಕಸ ಸಂಸ್ಕರಣೆ, ಆತಂಕ ಬೇಡ: ಡಿ.ಕೆ.ಶಿವಕುಮಾರ್‌
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ ಪ್ರಕರಣ: ಎಸ್ಐಟಿ ತನಿಖೆಗೆ ಸಿ.ಟಿ.ರವಿ ಆಗ್ರಹ