
ಮುಂಬೈ: ಮುಂಬರುವ 2019ರ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದಿಂದ ಹೊರಬಂದು ಏಕಾಂಗಿಯಾಗಿ ಸ್ಪರ್ಧೆ ಮಾಡುವುದಾಗಿ ಶಿವಸೇನೆ ಘೋಷಿಸಿದ ಬೆನ್ನಲ್ಲೇ, ಈ ಬಗ್ಗೆ ಆತಂಕಕ್ಕೊಳಗಾದಂತಿರುವ ಬಿಜೆಪಿ, ಉಭಯ ಪಕ್ಷಗಳ ಮೈತ್ರಿಗೆ ಯಾವುದೇ ಧಕ್ಕೆಯಾಗದಂತೆ ಮುಲಾಮು ಹಚ್ಚಲು ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಶಿವಸೇನೆ ನಡುವೆ ಉದ್ಭವಿಸಿದ ಬಿಕ್ಕಟ್ಟು ಶಮನಕ್ಕಾಗಿ ಮಂಗಳವಾರ ಉದ್ಧವ್ ಠಾಕ್ರೆ ಅವರಿಗೆ ಆಪ್ತರಾದ ಮುಖಂಡರ ಜತೆ ಮಹಾರಾಷ್ಟ್ರದ ಬಿಜೆಪಿ ಮುಖಂಡರು ಸಭೆ ನಡೆಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದರಲ್ಲಿ ಗಂಡ-ಹೆಂಡತಿ ಜತೆ ವೈಮನಸ್ಯ ಸಾಮಾನ್ಯ. ಆದಾಗ್ಯೂ ಪತ್ನಿಗೆ ವಿಚ್ಛೇದನ ನೀಡಲು ನಾನು ಬಯಸಲ್ಲ ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.
ಆದರೆ, ಶಿವಸೇನೆ-ಬಿಜೆಪಿ ಮೈತ್ರಿ ಸಂಬಂಧದಲ್ಲಿ ನಮ್ಮದು ಪತಿಯ ಸ್ಥಾನ. ಹಾಗಾಗಿ, ಮೈತ್ರಿ ಮುರಿದುಕೊಳ್ಳುವ ವಿಚಾರದಿಂದ ಹಿಮ್ಮುಖವಾಗುವ ಮಾತೇ ಇಲ್ಲ ಎಂದು ಶಿವಸೇನೆ ಮುಖಂಡರೊಬ್ಬರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.