ಉತ್ತರ ಪ್ರದೇಶದಲ್ಲಿ ಬಿಜೆಪಿ ಮುಸ್ಲಿಮರನ್ನೂ ಕಣಕ್ಕಿಳಿಸಬೇಕಿತ್ತು: ರಾಜನಾಥ್ ಸಿಂಗ್

Published : Feb 23, 2017, 08:19 AM ISTUpdated : Apr 11, 2018, 01:07 PM IST
ಉತ್ತರ ಪ್ರದೇಶದಲ್ಲಿ ಬಿಜೆಪಿ ಮುಸ್ಲಿಮರನ್ನೂ ಕಣಕ್ಕಿಳಿಸಬೇಕಿತ್ತು: ರಾಜನಾಥ್ ಸಿಂಗ್

ಸಾರಾಂಶ

ಇತರ ರಾಜ್ಯಗಳಲ್ಲಿ ನಾವು ಮುಸ್ಲಿಮರಿಗೆ ಟಿಕೆಟ್ ನೀಡಿದ್ದೇವೆ, ಇಲ್ಲಿಯೂ (ಉತ್ತರ ಪ್ರದೇಶ) ಆ ಕುರಿತು ಮಾತುಕತೆ ನಡೆಯಬೇಕಿತ್ತು: ರಾಜನಾತ್ ಸಿಂಗ್

ಮುಂಬೈ (ಫೆ.23): ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಮುಸ್ಲಿಮರಿಗೂ ಟಿಕೆಟ್ ನೀಡಬೇಕಿತ್ತೆಂಬ ಅಭಿಪ್ರಾಯವನ್ನು ಪಕ್ಷದ ರಾಷ್ಟ್ರೀಯ ನಾಯಕ ರಾಜನಾಥ್ ಸಿಂಗ್ ವ್ಯಕ್ತಪಡಿಸಿದ್ದಾರೆ.

ಟೈಮ್ಸ್’ ನೌಗೆ ನೀಡಿದ ಸಂದರ್ಶನದಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಇತರ ರಾಜ್ಯಗಳಲ್ಲಿ ನಾವು ಮುಸ್ಲಿಮರಿಗೆ ಟಿಕೆಟ್ ನೀಡಿದ್ದೇವೆ, ಇಲ್ಲಿಯೂ (ಉತ್ತರ ಪ್ರದೇಶ) ಆ ಕುರಿತು ಮಾತುಕತೆ ನಡೆಯಬೇಕಿತ್ತು. ಬಹುಷ: ಗೆಲ್ಲುವಂತಹ ಸೂಕ್ತ ಅಭ್ಯರ್ಥಿ ಸಂಸದೀಯ ಮಂಡಳಿಗೆ ಸಿಗದಿರಬಹುದು, ಆದರೆ ಮುಸ್ಲಿಮರಿಗೆ ಟಿಕೆಟ್ ಸಿಗಲೆಬೇಕೆಂದು ನಾನು ಭಾವಿಸುತ್ತೇನೆ, ಎಂದಿದ್ದಾರೆ.

ಮುಂದಿನ ದಿನಗಳಲ್ಲಿ ಈ ಕುರಿತು ನಾವು ಗಮನಹರಿಸುತ್ತೇವೆಯೆಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಉತ್ತರ ಪ್ರದೇಶ ರಾಜ್ಯದಲ್ಲಿ ಶೇ.20ರಷ್ಟು ಮುಸ್ಲಿಮ್ ಜನನಸಂಖ್ಯೆಯಿದೆ. ಉತ್ತರ ಪ್ರದೇಶದಲ್ಲಿ ಇಂದು ನಾಲ್ಕನೇ ಹಂತ್ದ ಮತದಾನ ನಡೆಯುತ್ತಿದ್ದು, ಇನ್ನೂ ಮೂರು ಹಂತದ ಮತದಾನ ಬಾಕಿ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಜಯಪುರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ 5 ಎಕರೆ ಕಬ್ಬು, ಟ್ರೈಲರ್ ಬೆಂಕಿಗಾಹುತಿ! ರೈತ ಕಣ್ಣೀರು
ಜನವರಿ 1, 2026 ರಿಂದ 10 ನಿಯಮಗಳಲ್ಲಿ ಬದಲಾವಣೆ, ಸಂಬಳ-ಪಡಿತರ ಮೇಲೆ ನೇರ ಪರಿಣಾಮ