ಕರ್ನಾಟಕ, ಪ.ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಮಾತ್ರ ಸುವರ್ಣ ಯುಗ: ಅಮಿತ್ ಶಾ

Published : Mar 03, 2018, 05:15 PM ISTUpdated : Apr 11, 2018, 12:37 PM IST
ಕರ್ನಾಟಕ, ಪ.ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಮಾತ್ರ ಸುವರ್ಣ ಯುಗ: ಅಮಿತ್ ಶಾ

ಸಾರಾಂಶ

ಕಳೆದ ಬಾರಿಯ ಚುನಾವಣೆಯಲ್ಲಿ ಶೂನ್ಯ ಸಂಪಾದಿಸಿದ ಬಿಜೆಪಿ, ತ್ರಿಪುರಾದಲ್ಲಿ ಈ ಸಲ ಸರಕಾರ ರಚಿಸುವಷ್ಟು ಸ್ಪಷ್ಟ ಬಹುಮತ ಪಡೆದುಕೊಂಡಿದ್ದು, ಈಶಾನ್ಯ ರಾಜ್ಯಗಳ ಜನತೆ ಮೋದಿ ಸರಕಾರವನ್ನು ಸಮರ್ಥಿಸಿದ್ದಾರೆಂದು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಹೊಸದಿಲ್ಲಿ: ಕಳೆದ ಬಾರಿಯ ಚುನಾವಣೆಯಲ್ಲಿ ಶೂನ್ಯ ಸಂಪಾದಿಸಿದ ಬಿಜೆಪಿ, ತ್ರಿಪುರಾದಲ್ಲಿ ಈ ಸಲ ಸರಕಾರ ರಚಿಸುವಷ್ಟು ಸ್ಪಷ್ಟ ಬಹುಮತ ಪಡೆದುಕೊಂಡಿದ್ದು, ಈಶಾನ್ಯ ರಾಜ್ಯಗಳ ಜನತೆ ಮೋದಿ ಸರಕಾರವನ್ನು ಸಮರ್ಥಿಸಿದ್ದಾರೆಂದು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ತೋರಿದ ಸಾಧನೆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚುನಾವಣಾ ಚಾಣಕ್ಯ ಅಮಿತ್ ಶಾ, 'ಕರ್ನಾಟಕ ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದಾಗ ಮಾತ್ರ  ಸುವರ್ಣ ಯುಗ ಆರಂಭವಾಗುತ್ತದೆ,' ಎನ್ನುವ ಮೂಲಕ ತ್ರಿ ರಾಜ್ಯಗಳಲ್ಲಿ ಬಿಜೆಪಿ ತೋರಿದ ಸಾಧನೆಗಿನ್ನೂ ಪೂರ್ಣ ತೃಪ್ತರಾಗಿಲ್ಲವೆಂಬುದನ್ನು ಸೂಚ್ಯವಾಗಿ ಹೇಳಿದ್ದಾರೆ.

'ಪ್ರಧಾನಿ ಮೋದಿ ಕೈಗೊಂಡ ಅಭಿವೃದ್ಧಿ ಕಾರ್ಯಗಳಿಗೆ ಜನರು ಬೆಂಬಲ ಸೂಚಿಸಿರುವುದು ಪಕ್ಷದ ಗೆಲುವಿನಿಂದ ವೇದ್ಯವಾಗಿದೆ,' ಎಂದು  ಹೇಳಿದರು.

'ದೇಶದ ಯಾವುದೇ ರಾಜ್ಯಕ್ಕೂ ಎಂಡಪಂಥೀಯ ಪಕ್ಷ ಹೊಂದುವುದಿಲ್ಲವೆಂಬುದಕ್ಕೆ ತ್ರಿಪುರಾದಲ್ಲಿ ಸಿಪಿಎಂಗೆ ಸೋಲಾಗಿರುವುದೇ ಸಾಕ್ಷಿ. ಕಾಂಗ್ರೆಸ್ ಅಭ್ಯರ್ಥಿಗಳು ಠೇವಣಿ ಉಳಿಸಿಕೊಳ್ಳುವಲ್ಲಿಯೂ ವಿಫಲವಾಗಿದ್ದಾರೆ,' ಎಂದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್