
ಕೋಲ್ಕತ್ತಾ(ಜೂ.04): ಪ.ಬಂಗಾಳದಲ್ಲಿ ತನ್ನ ಬೇರನ್ನು ಗಟ್ಟಿಗೊಳಿಸುತ್ತಿರುವ ಬಿಜೆಪಿ, ರಾಜ್ಯದಲ್ಲೂ ಕೇಸರಿ ಬಾವುಟ ರಾರಾಜಿಸುವಂತೆ ಮಾಡಲು ತಂತ್ರ ರೂಪಿಸಿದೆ.
ಜೈ ಶ್ರೀರಾಮ್ ಘೋಷಣೆ ಕೂಗಿದವರನ್ನು ಜೈಲಿಗೆ ಕಳುಹಿಸುತ್ತಿರುವ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರವನ್ನು, ಅಧಿಕಾರದಿಂದ ಕಿತ್ತೆಸೆಯಲು ಬಿಜೆಪಿ ಶಪಥ ಮಾಡಿದೆ.
ಅದರಂತೆ ಬಂಗಾಳದಲ್ಲಿ ಪಕ್ಷದ ಪ್ರಭಾವ ವೃದ್ಧಿಸಲು ‘ಜೈ ಮಹಾ ಕಾಳಿ ಮತ್ತು ಜೈ ಶ್ರೀರಾಮ್’ ಘೋಷಣೆಯನ್ನು ಬಳಸುವುದಾಗಿ ಬಿಜೆಪಿ ಸ್ಪಷ್ಟಪಡಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಪ.ಬಂಗಾಳ ಬಿಜೆಪಿ ಉಸ್ತುವಾರಿ ಕೈಲಾಶ್ ವಿಜಯವರ್ಗೀಯ, ಮಮತಾ ಸರ್ಕಾರದ ವಿರುದ್ಧ ಜನಾಂದೋಲನ ರೂಪಿಸಲು ಬಿಜೆಪಿ ‘ಜೈ ಮಹಾಕಾಳಿ ಮತ್ತು ಜೈ ಶ್ರೀರಾಮ್’ ಘೋಷಣೆಯನ್ನು ರಾಜ್ಯದ ಉದ್ದಗಲಕ್ಕೂ ಮೊಳಗಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರವನ್ನು ಕಿತ್ತೆಸೆಯಲು ಕಾಳಿ ಮಾತೆ ಮತ್ತು ಪ್ರಭು ಶ್ರೀರಾಮ ಬಿಜೆಪಿಗೆ ಆಶೀರ್ವಾದ ಮಾಡಲಿದ್ದಾರೆ ಎಂದು ವಿಜಯವರ್ಗೀಯ ಭರವಸೆ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.