
ಬೆಂಗಳೂರು(ಫೆ.09): ಪರಿವರ್ತನ ಯಾತ್ರೆಯ ನಂತರ ಬಿಜೆಪಿ ಸ್ಲಂ ರಾಜಕೀಯ ಶುರುವಿಟ್ಟುಕೊಳ್ಳಲಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಒಳಗೊಂಡು ಪ್ರಮುಖ ನಾಯಕರು ಕೊಳಚೆ ಪ್ರದೇಶಗಳಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಪಿ.ಸಿ.ಮೋಹನ್, ಕಳೆದ 84 ದಿನಗಳಿಂದ ರಾಜ್ಯದ ನಾನಾ ಭಾಗಗಳಲ್ಲಿ ಪರಿವರ್ತನಾ ಯಾತ್ರೆ ನಡೆಸಿದ್ದೇವೆ. ಈಗ ಕೊಳಚೆ ಪ್ರದೇಶಗಳ ಜನರ ಕಷ್ಟ ಅರಿಯುವ ನಿಟ್ಟಿನಲ್ಲಿ ಸ್ಲಂ'ಗಳಲ್ಲಿ ವಾಸ್ತವ್ಯ ಹೂಡಲು ನಿರ್ಧರಿಸಿದ್ದೇವೆ. ಬೆಂಗಳೂರಿನ ಗಾಂಧಿನಗರದ ಲಕ್ಷಣ'ಪುರಿ ಕೊಳಚೆ ಪ್ರದೇಶದಲ್ಲಿ ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಒಂದು ದಿನದ ವಾಸ್ತವ್ಯ ಹೂಡಲಿದ್ದಾರೆ. ಬಿಎಸ್'ವೈ ಜೊತೆ ಆರ್.ಅಶೋಕ್, ಪಿ.ಸಿ. ಮೋಹನ್, ಎನ್.ರವಿ ಕೂಡ ವಾಸ್ತವ್ಯ ಹೂಡಲಿದ್ದಾರೆ' ಎಂದು ತಿಳಿಸಿದರು.
ರಾಜ್ಯದ ವಿವಿಧೆಡೆ ಇತರೆ ವಾಸ್ತವ್ಯ ಹೂಡುವ ನಾಯಕರ ಪಟ್ಟಿ
ಶಿವಮೊಗ್ಗ : ಈಶ್ವರಪ್ಪ
ಹುಬ್ಬಳ್ಳಿ : ಶೆಟ್ಟರ್
ವಿಜಯಪುರ: ಗೋವಿಂದ ಕಾರಜೋಳ
ಮೈಸೂರು: ಶೋಭಾ ಕರಂದ್ಲಾಜೆ.
ತಿಪ್ಪಾರೆಡ್ಡಿ : ಚಿತ್ರದುರ್ಗ
ತಿಪ್ಪರಾಜು : ರಾಯಚೂರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.