
ಯಲಹಂಕ : ಹಾಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಹಾಟ್ರಿಕ್ ನಿರೀಕ್ಷೆಯೊಂದಿಗೆ ಮತ್ತೆ ಕಣಕ್ಕಿಳಿಯುವುದು ಬಹುತೇಕ ನಿಶ್ಚಿತ. ಕಾಂಗ್ರೆಸ್ನಿಂದ ಎಂಎಲ್ಸಿ ಎಂ. ನಾರಾಯಣಸ್ವಾಮಿ ಸ್ಪರ್ಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಸೆ ಮೇರೆಗೆ ನಾರಾಯಣಸ್ವಾಮಿ ಕಣಕ್ಕೆ ಇಳಿಯಲು ಬಯಸಿದ್ದಾರೆ. ಇನ್ನು ಕೆಪಿಸಿಸಿ ಕಾರ್ಯದರ್ಶಿ ಕೇಶವರಾಜಣ್ಣ ಸ್ವ ಪ್ರಯತ್ನದಿಂದ ಟಿಕೆಟ್ಗಾಗಿ ಪ್ರಯತ್ನಿಸಿದ್ದರೆ, ವೀರಪ್ಪ ಮೊಯ್ಲಿ ಅವರು ಗೋಪಾಲಕೃಷ್ಣ ಅವರಿಗೆ ಟಿಕೆಟ್ ಕೊಡಿಸಲು ಯತ್ನ ನಡೆಸಿದ್ದಾರೆ.
ಜೆಡಿಎಸ್ನಿಂದ ವಿಧಾನಪರಿಷತ್ತಿನ ಸದಸ್ಯರಾಗಿದ್ದ ‘ಮುಂಗಾರು ಮಳೆ’ ಚಿತ್ರದ ಖ್ಯಾತಿಯ ಇ.ಕೃಷ್ಣಪ್ಪ ಅವರು ಮತ್ತೊಮ್ಮೆ ಕಣಕ್ಕಿಳಿಯುತ್ತಾರೆಯೇ ಎಂಬುದನ್ನು ಕಾದು ನೋಡಬೇಕು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.