
ನವದೆಹಲಿ(ಅ.27): ಬಿಜೆಪಿ ಬಂಡೆಯಂತೆ ಅಯ್ಯಪ್ಪ ಭಕ್ತರೊಂದಿಗೆ ನಿಂತಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಕೇರಳದ ಕಣ್ಮೂರು ಜಿಲ್ಲೆಯ ತಾಳಿಕ್ಕಾವುನಲ್ಲಿ ಬಿಜೆಪಿ ಜಿಲ್ಲಾ ಸಮಿತಿ ಕಚೇರಿ ಉದ್ಘಾಟಿಸಿದ ಬಳಿಕ ಮಾತನಾಡಿರುವ ಅವರು, ಶಬರಿಮಲೆ ಮಹಿಳಾ ಪ್ರವೇಶದ ವಿರುದ್ಧ ಪ್ರತಿಭಟಿಸಿದ್ದ 2000 ಬಿಜೆಪಿ ಹಾಗೂ ಆರ್ಎಸ್ಎಸ್ ಕಾರ್ಯಕರ್ತರನ್ನು ಬಂಧನಕ್ಕೊಳಪಡಿಸುವುದನ್ನು ತೀವ್ರವಾಗಿ ಖಂಡಿಸಿದ್ದಾರೆ.
ಕೇರಳ ರಾಜ್ಯದಲ್ಲಿಂದು ಧಾರ್ಮಿಕ ನಂಬಿಕೆಗಳು ಹಾಗೂ ರಾಜ್ಯ ಸರ್ಕಾರದ ಕ್ರೌರ್ಯಗಳ ನಡುವೆ ಹೋರಾಟ ನಡೆಯುತ್ತಿದೆ. ಬಿಜೆಪಿ, ಆರ್ಎಸ್ಎಸ್ ಹಾಗೂ ಇತರೆ ಸಂಘಟನೆಗಳ 2000ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧನಕ್ಕೊಳಪಡಿಸಲಾಗಿದೆ. ಬಿಜೆಪಿ ಅಯ್ಯಪ್ಪ ಭಕ್ತರ ಜೊತೆಗೆ ಬಂಡೆಯಂತೆ ನಿಂತಿದೆ ಎಂದು ಹೇಳಿದರು.
ಇದೇ ವೇಳೆ ಕೇರಳದ ಆಡಳಿತಾರೂಢ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಶಾ, ವಿವಿಧ ನಿಯಮ ಹಾಗೂ ಪದ್ಧತಿಗಳೊಂದಿಗೆ ಸಾಕಷ್ಟು ದೇವಾಲಯಗಳು ನಡೆಯುತ್ತಿವೆ. ಸರ್ಕಾರದ ವರ್ತನೆ ಹೀಗೆಯೇ ಮುಂದುವರೆದರೆ, ಎಲ್'ಡಿಎಸ್ ಸರ್ಕಾರವನ್ನು ಕೆಳಗಿಳಿಸಲು ಬಿಜೆಪಿ ಹಿಂಜರಿಯುವುದಿಲ್ಲ ಎಂದು ತಿಳಿಸಿದ್ದಾರೆ.
ದೇವಾಲಯದ ಪ್ರವೇಶದ ಮೂಲಕ ಲಿಂಗ ಸಮಾನತೆಯನ್ನು ಸಾಧಿಸಲು ಸಾಧ್ಯವಿಲ್ಲ. ಕೇರಳ ರಾಜ್ಯದಲ್ಲಿಂದು ತುರ್ತು ಪರಿಸ್ಥಿತಿಯಂತಹ ವಾತಾವರಣ ನಿರ್ಮಾಣವಾಗಿದೆ. ಅಯ್ಯಪ್ಪ ಭಕ್ತರನ್ನು ಕೆರಳಿಸಿವುದು ಎಂದರೆ ಬೆಂಕಿಯೊಂದಿಗೆ ಆಟವಾಡಿದಂತೆ ಎಂದು ಎಚ್ಚರಿಸಿದ್ದಾರೆ.
ಇನ್ನು ಅಮಿತ್ ಶಾ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರು ಆಡಳಿತಾರೂಢ ಎಡರಂಗ, ಇದು ಪ್ರಜಾಪ್ರಭುತ್ವಕ್ಕೆ ನೀಡುತ್ತಿರುವ ಎಚ್ಚರಿಕೆ ಎಂದು ಹರಿಹಾಯ್ದಿದೆ. ಈ ಕುರಿತು ಮಾತನಾಡಿರುವ ಸಿಎಂ ಪಿಣರಾಯಿ ವಿಜಯನ್, ಅಮಿತ್ ಶಾ ಹೇಳಿಕೆ ಅತ್ಯಂತ ಖಂಡನಾರ್ಹ ಎಂದು ಕಿಡಿಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.