
ಆಗ್ರಾ : 2019ರ ಲೋಕಸಭಾ ಚುನಾವಣೆಗೆ ಈಗಾಗಲೇ ವಿವಿಧ ಪಕ್ಷಗಳು ಸಕಲ ಸಿದ್ಧತೆಯನ್ನು ಆರಂಭ ಮಾಡಿವೆ. ಇತ್ತ ಉತ್ತರ ಪ್ರದೇಶದಲ್ಲಿ ಬಿಜೆಪಿ ಹಿಂದುಗಳ ಮತವನ್ನು ಕಲೆಹಾಕಲು ಮಾಸ್ಟರ್ ಪ್ಲಾನ್ ಮಾಡಿಕೊಂಡಿದೆ.
ಈಗಾಗಲೇ ಇಲ್ಲಿನ ವಿವಿಧ ಪ್ರದೇಶಗಳಲ್ಲಿರುವ ಪ್ರತೀ ಬೂತ್ ಮಟ್ಟದಲ್ಲಿರುವ ಮಠ ಮಂದಿರಗಳು ಹಾಗೂ ಧಾರ್ಮಿಕ ಕೇಂದ್ರಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಸಂಗ್ರಹ ಮಾಡುತ್ತಿದೆ. ಒಂದು ನಿರ್ದಿಷ್ಟ ಉದ್ದೇಶವನ್ನು ಇರಿಸಿಕೊಂಡು ಎಸ್ ಸಿ ಹಾಗೂ ಒಬಿಸಿಗಳ ಮಾಹಿತಿಯನ್ನು ಸಂಗ್ರಹ ಮಾಡುತ್ತಿದೆ.
ಒಟ್ಟು ರಾಜ್ಯದ 1.4 ಲಕ್ಷ ಬೂತ್ ಗಳಲ್ಲಿ ಈ ಮಾಹಿತಿಯನ್ನು ಸಂಗ್ರಹ ಮಾಡುತ್ತಿದೆ. ಅಲ್ಲದೇ ಪ್ರಮುಖ ಅರ್ಚಕರುಗಳ ಮಾಹಿತಿ ಹಾಗೂ ದೂರವಾಣಿ ಸಂಖ್ಯೆಗಳನ್ನೂ ಕೂಡ ಪಡೆದುಕೊಳ್ಳುತ್ತಿದ್ದಾರೆ. ಈ ಮೂಲಕ ಪ್ರತಿಯೊಬ್ಬ ವ್ಯಕ್ತಿಗಳನ್ನೂ ಕೂಡ ತಲುಪುವುದೇ ಉದ್ದೇಶವಾಗಿದೆ.
ಒಬಿಸಿ ಹಾಗೂ ಎಸ್ ಸಿ ಮಾಹಿತಿ ಸಂಗ್ರಹ ಮಾಡಲು ಆಯಾ ಸಮುದಾಯದವರನ್ನೇ ಬೂತ್ ಮಟ್ಟದಲ್ಲಿ ನೇಮಕ ಮಾಡಲಾಗುತ್ತಿದ್ದು ಅದರಲ್ಲಿ ಮಹಿಳೆಯರೂ ಕೂಡ ಸೇರಿದ್ದಾರೆ.
ಅಲ್ಲದೇ ಸ್ಥಳೀಯ ಮಟ್ಟದಲ್ಲಿ ಇರುವ ಪ್ರಮುಖ ನಾಯಕರ ಬಗ್ಗೆಯೂ ಮಾಹಿತಿ ಸಂಗ್ರಹ ಮಾಡುವಂತೆ ತಿಳಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಒಟ್ಟು 1.6 ಲಕ್ಷ ಬೂತ್ ಗಳಿದ್ದು ಪ್ರತೀ ಬೂತ್ ಗೂ ಕೂಡ 21 ಸದಸ್ಯರು, ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಕಾರ್ಯದರ್ಶಿಗಳನ್ನು ನೇಮಕ ಮಾಡುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.