
ಶಿವಮೊಗ್ಗ : ಲೋಕಸಭಾ ಚುನಾವಣೆ ಮುಕ್ತಾಯವಾದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಹಲವು ರೀತಿಯ ಬೆಳವಣಿಗೆಗಳಾಗುತ್ತಿವೆ. ರಾಜಕೀಯದಲ್ಲಿ ಸರ್ಕಾರ ಪತನ, ನಾಯಕರ ಬದಲಾವಣೆ ವಿಚಾರದ ಚರ್ಚೆಗಳು ಜೋರಾಗಿದೆ.
ಶಿವಮೊಗ್ಗದಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಆಯನೂರು ಮಂಜುನಾಥ ತಾವೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸಲು ಸಿದ್ಧ ಎಂದಿದ್ದಾರೆ.
ಬಿಜೆಪಿ ರಾಜ್ಯಾದ್ಯಕ್ಷ ಯಡಿಯೂರಪ್ಪ ಅವರ ಬದಲಾವಣೆ ಆಗಬೇಕಿಲ್ಲ. ಇನ್ನೊಂದಿಷ್ಟು ಕಾಲ ಬಿಎಸ್ ವೈ ರಾಜ್ಯಾಧ್ಯಕ್ಷರಾಗಿ ಮುಂದುವರಿಯಬೇಕು ಎಂದರು.
ಒಂದು ವೇಳೆ ಅವರು ತಮ್ಮ ಸ್ಥಾನ ತ್ಯಜಿಸಿದಲ್ಲಿ , ಪಕ್ಷ ಅವಕಾಶ ಕಲ್ಪಿಸಿದಲ್ಲಿ ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸಲು ಸಿದ್ಧರಿರುವುದಾಗಿ ಹೇಳಿದರು.
‘ಶಿವಮೊಗ್ಗದಲ್ಲಿ ಮೈತ್ರಿ ಅಭ್ಯರ್ಥಿ ಮಧುಗೆ 72 ಸಾವಿರ ಅಂತರದಲ್ಲಿ ಗೆಲುವು’
ಬಿಜೆಪಿ ಪಕ್ಷದ ಸ್ಥಳೀಯ ನಾಯಕತ್ವ ದಿಂದ ಹಿಡಿದು ರಾಷ್ಟ್ರೀಯ ನಾಯಕತ್ವದ ವರೆಗೆ ಜೂನ್ ತಿಂಗಳಲ್ಲಿ ಬದಲಾವಣೆ ನಡೆಯುವುದು ಸಹಜ ಪ್ರಕ್ರಿಯೆ. ಈ ವೇಳೆ ಬದಲಾವಣೆಯಲ್ಲಿ ತಾವೂ ಜವಾಬ್ದಾರಿ ನಿರ್ವಹಿಸಲು ತಯಾರಿರುವುದಾಗಿ ತಿಳಿಸಿದರು.
ಸದ್ಯ ಬಿಜೆಪಿ ವಿಧಾನ ಪರಿಷತ್ ಸದಸ್ಯರಾಗಿರುವ ಬಿಜೆಪಿ ನಾಯಕ ಆಯನೂರು ಮಂಜುನಾಥ್, 2012 ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸಂಸದರಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.