ಮತ್ತೆ ಅರಳಿತು ಕಮಲ : ಭರ್ಜರಿ ಗೆಲುವು

Published : Dec 15, 2018, 12:15 PM ISTUpdated : Dec 15, 2018, 12:21 PM IST
ಮತ್ತೆ ಅರಳಿತು ಕಮಲ : ಭರ್ಜರಿ ಗೆಲುವು

ಸಾರಾಂಶ

ಪಂಚರಾಜ್ಯ ಚುನಾವಣೆಯಲ್ಲಿ ಸೋಲಿನ ಸುಳಿಯಲ್ಲಿ ಸಿಲುಕಿದ್ದ ಬಿಜೆಪಿಗೆ ಇದೀಗ ಮತ್ತೊಮ್ಮೆ ಹುರುಪು ತುಂಬಿದೆ ಅಸ್ಸಾಂನಲ್ಲಿ ನಡೆದ ಚುನಾವಣೆ. ಅಸ್ಸಾಂ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದೆ. 

ಗುವಾಹಟಿ : ಇತ್ತೀಚೆಗಷ್ಟೇ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ತೀವ್ರ ಹಿನ್ನಡೆ ಅನುಭವಿಸಿದ್ದ ಬಿಜೆಪಿಗೆ ಅಸ್ಸಾಂನಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆ ಮತ್ತೆ ಶಕ್ತಿ ತುಂಬಿದಂತಾಗಿದೆ.  ಬಿಜೆಪಿ ತನ್ನ ಜಯದ ಹಾದಿಯನ್ನು ಮುಂದುವರಿಸಿದ್ದು, ಅಸ್ಸಾಂ ಪಂಚಾಯತ್ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಭಾರಿಸಿದೆ. 

ಇದರಿಂದ ಲೋಕಸಭಾ ಚುನಾವಣೆ ಶೀಘ್ರದಲ್ಲೇ ಇರುವ ಈ ಹೊತ್ತಿನಲ್ಲಿ ಮತ್ತೆ ಭರವಸೆ ಮೂಡಿದಂತಾಗಿದೆ. 

ಡಿಸೆಂಬರ್ 5 ಹಾಗೂ 9 ರಂದು 2 ಹಂತದಲ್ಲಿ ನಡೆದ ಚುನಾವಣೆಯ ಫಲಿತಾಂಶ ಡಿಸೆಂಬರ್ 14ರ ಶುಕ್ರವಾರ ಪ್ರಕಟವಾಗಿದ್ದು, ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆಯುವ ಮೂಲಕ ವಿಜಯ ಪತಾಕೆಯನ್ನು ಹಾರಿಸಿದೆ. 

ಅಸ್ಸಾಂನ 2199 ಗ್ರಾಮ ಪಂಚಾಯತ್ ಅಧ್ಯಕ್ಷರು, 21,999 ಪಂಚಾಯತ್ ಸದಸ್ಯ ಹುದ್ದೆಗೆ, 2199 ಅಂಚಾಲಿಕ್ ಪಂಚಾಯತ್ ಅಧ್ಯಕ್ಷ ಹುದ್ದೆಗೆ, 420 ಜಿಲ್ಲಾ ಪಂಚಾಯತ್ ಸದಸ್ಯ ಹುದ್ದೆಗೆ ಚುನಾವಣೆ ನಡೆದಿದ್ದು,  ಶೇ.82ರಷ್ಟು ಮತದಾನ ನಡೆದಿತ್ತು.

ಒಟ್ಟು 7769 ಪಂಚಾಯತ್ ಸೀಟುಗಳಲ್ಲಿ ಬಿಜೆಪಿ ಗೆದ್ದಿದ್ದು, ಕಾಂಗ್ರೆಸ್ 5896 ಸೀಟುಗಳನ್ನು   ಪಡೆದಿದೆ. ಇನ್ನು ಎಜಿಪಿ 1372, AIUDF 755 ಇತರೆ 2112 ಗೆಲುವು ಪಡೆದಿವೆ.  ಇನ್ನು ಜಿಲ್ಲಾ ಪಂಚಾಯತ್ ಸದಸ್ಯ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 223, ಕಾಂಗ್ರೆಸ್ 139, ಎಜಿಪಿ 18 ಸೀಟುಗಳನ್ನು ಗೆದ್ದುಕೊಂಡಿವೆ. 

ಬಿಜೆಪಿ ಹೆಚ್ಚಿನ ಸ್ಥಾನ ಪಡೆದುಕೊಂಡಿದ್ದು, ಇದಕ್ಕೆ ಬಿಜೆಪಿ ಮುಖ್ಯಮಂತ್ರಿ ಸರ್ಬಾನಂದ್ ಸೋನೋವಾಲ್ ಜನತೆಗೆ ಧನ್ಯವಾದ ತಿಳಿಸಿದ್ದು, ಇದು ಒಳ್ಳೆಯ ಆಡಳಿತ ಹಾಗೂ ಅಭಿವೃದ್ಧಿಗೆ ಸಿಕ್ಕ ಜಯ ಎಂದು ಹೇಳಿದ್ದಾರೆ. 

ಪಂಚರಾಜ್ಯ ಚುನಾವಣೆ: ರಾಹುಲ್ ಗಾಂಧಿ ಮಾಡಿದ ಗಿಮಿಕ್ಕೇನು?

ರಾಜಸ್ಥಾನದಲ್ಲಿ ಕಾಂಗ್ರೆಸ್ ಗೆದ್ದಿದ್ದರ ಗುಟ್ಟೇನು?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವ್ಯವಹಾರದ ಬಗ್ಗೆ ಮಾತನಾಡುತ್ತಿದ್ದಾಗಲೇ ಉದ್ಯಮಿಗೆ ಹಠಾತ್ ಹೃದಯಾಘಾತ: ಸಿಪಿಆರ್ ಮಾಡಿ ಜೀವ ಉಳಿಸಿದ ಯುವಕ
ಮಾಟ ಮಂತ್ರ ಪರಿಹಾರದ ನಾಟಕ: ಮಲ್ಲೇಶ್ವರಂನಲ್ಲಿ ಚಿನ್ನಾಭರಣ ದೋಚಿದ ನಕಲಿ ಸ್ವಾಮಿಗಳು!