ಜೇಠ್ಮಲಾನಿ ಉಚ್ಛಾಟಿಸಿದ್ದಕ್ಕೆ ಶಾ ವಿಷಾದ: 5 ವರ್ಷದ ಕಾನೂನು ಸಮರ ಅಂತ್ಯ

Published : Dec 08, 2018, 09:03 AM IST
ಜೇಠ್ಮಲಾನಿ ಉಚ್ಛಾಟಿಸಿದ್ದಕ್ಕೆ ಶಾ ವಿಷಾದ: 5 ವರ್ಷದ ಕಾನೂನು ಸಮರ ಅಂತ್ಯ

ಸಾರಾಂಶ

ಬಿಜೆಪಿ ಮಾಜಿ ಮುಖಂಡ ರಾಮ್‌ ಜೇಠ್ಮಲಾನಿ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದ ಕ್ರಮಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. 

ನವದೆಹಲಿ[ಡಿ.08]: ಹಿರಿಯ ವಕೀಲ ಹಾಗೂ ಬಿಜೆಪಿ ಮಾಜಿ ಮುಖಂಡ ರಾಮ್‌ ಜೇಠ್ಮಲಾನಿ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದ ಕ್ರಮಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಇದರಿಂದ ಬಿಜೆಪಿ ಮತ್ತು ರಾಮ್‌ ಜೇಠ್ಮಲಾನಿ ನಡುವಿನ ಕಾನೂನು ಸಮರ ಅಂತ್ಯವಾಗಿದೆ.

ತಮ್ಮ ನಡುವಿನ ಕಲಹವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವುದಾಗಿ ಎಂದು ಬಿಜೆಪಿ ಮತ್ತು ರಾಮ್‌ ಜೇಠ್ಮಲಾನಿ ಅವರು ಸಲ್ಲಿಸಿದ್ದ ಜಂಟಿ ಅರ್ಜಿಗೆ ದೆಹಲಿ ನ್ಯಾಯಾಲಯ ಒಪ್ಪಿಗೆ ಸೂಚಿಸಿತು. ಈ ಬಗ್ಗೆ ಗುರುವಾರ ವಿಚಾರಣೆ ನಡೆಸಿದ ದೆಹಲಿ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಸುಮಿತ್‌ ದಾಸ್‌ ಅವರು ಗುರುವಾರ ಈ ಅರ್ಜಿಯನ್ನು ವಿಲೇವಾರಿ ಮಾಡಿದ್ದಾರೆ.

2013ರಲ್ಲಿ ತಮ್ಮನ್ನು ಪಕ್ಷದಿಂದ ಹೊರ ಹಾಕಿದ್ದ ಬಿಜೆಪಿ ವಿರುದ್ಧ ರಾಮ್‌ ಜೇಠ್ಮಲಾನಿ ಅವರು ಕಾನೂನಿನ ಮೊರೆ ಹೋಗಿದ್ದರು. ಅಲ್ಲದೆ, ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆಯಾಗಿದೆ ಎಂದು ಆರೋಪಿಸಿ 50 ಲಕ್ಷ ಪರಿಹಾರ ನೀಡಬೇಕು ಎಂದು ಅರ್ಜಿಯಲ್ಲಿ ತಿಳಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು