ಕೋಟಿ – ಕೋಟಿ ರು.ಗೆ ಸೇಲ್ ಆಯ್ತಾ ಇಲ್ಲಿ ಟಿಕೆಟ್ : ಬಿಜೆಪಿ ಟಿಕೆಟ್ ಬಾಂಬ್

Published : Apr 09, 2018, 10:36 AM ISTUpdated : Apr 14, 2018, 01:12 PM IST
ಕೋಟಿ – ಕೋಟಿ ರು.ಗೆ ಸೇಲ್ ಆಯ್ತಾ ಇಲ್ಲಿ ಟಿಕೆಟ್ : ಬಿಜೆಪಿ ಟಿಕೆಟ್ ಬಾಂಬ್

ಸಾರಾಂಶ

ಈಗಾಗಲೇ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೊದಲ ಪಟ್ಟಿ ಬಿಡುಗಡೆಯಾಗಿದೆ.  ಈಗಾಗಲೇ ಅನೇಕರು ಅಸಮಾಧಾನಗೊಂಡಿದ್ದು, ಇದೀಗ ಟಿಕೆಟ್ ವಿಚಾರವಾಗಿ ದೊಡ್ಡ ಬಾಂಬ್ ಸಿಡಿಸಲಾಗಿದೆ.

ಬೆಂಗಳೂರು : ಈಗಾಗಲೇ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೊದಲ ಪಟ್ಟಿ ಬಿಡುಗಡೆಯಾಗಿದೆ.  ಈಗಾಗಲೇ ಅನೇಕರು ಅಸಮಾಧಾನಗೊಂಡಿದ್ದು, ಇದೀಗ ಟಿಕೆಟ್ ವಿಚಾರವಾಗಿ ದೊಡ್ಡ ಬಾಂಬ್ ಸಿಡಿಸಲಾಗಿದೆ. ಚಿಕ್ಕಪೇಟೆ ಕ್ಷೇತ್ರದ ಟಿಕೆಟ್​ ಹಂಚಿಕೆಯಲ್ಲಿ ಕೋಟಿ, ಕೋಟಿ  ವ್ಯವಹಾರ ನಡೆಸಲಾಗಿದೆ ಎನ್ನುವ ವಿಚಾರವೊಂದು ಬೆಳಕಿಗೆ ಬಂದಿದೆ. ಫೇಸ್ ಬುಕ್ ಬರಹವೊಂದು  ಇದಕ್ಕೆ ಇನ್ನಷ್ಟು ತುಪ್ಪ ಸುರಿದಿದೆ. ​

‘ಚಿಕ್ಕಪೇಟೆ ಬಿಜೆಪಿ ಟಿಕೆಟ್​ 2 ಕೋಟಿ ರೂಪಾಯಿಗೆ ಸೇಲ್ ಆಗಿದೆ’ ಎಂಬ ಆರೋಪ ಕೇಳಿ ಬಂದಿದೆ. ‘ಕಾಂಗ್ರೆಸ್ ಶಾಸಕ ಆರ್.ವಿ.ದೇವರಾಜ್​ 2 ಕೋಟಿಗೆ ಬಿಜೆಪಿ ಟಿಕೆಟ್ ಖರೀದಿಸಿದ್ದಾರೆ ಎಂದು ಫೇಸ್ ಬುಕ್ ಮೆಸೆಂಜರ್ ನಲ್ಲಿ ಸುದ್ದಿಯೊಂದು ಹರಿದಾಡುತ್ತಿದೆ.

ಉದಯ್ ಗರುಡಾಚಾರ್ ಪರ ಕಾಂಗ್ರೆಸ್ ಶಾಸಕ ಆರ್.ವಿ.ದೇವರಾಜ್ ಬ್ಯಾಟಿಂಗ್ ಮಾಡಿದ್ದು, ಉದಯ ಗರುಡಾಚಾರ್​ಗೆ ಟಿಕೆಟ್ ನೀಡುವಂತೆ ಬಿಜೆಪಿ ನಾಯಕರಿಗೆ ಸೂಚಿಸಿದ್ದರು ಎನ್ನಲಾಗಿದೆ.  ‘2 ಕೋಟಿ ಕೊಟ್ಟು ತಮ್ಮ ಎದುರಾಳಿಯನ್ನು ಆರ್. ವಿ. ದೇವರಾಜ್ ತಾವೇ ನಿರ್ಧರಿಸಿಕೊಂಡಿದ್ದಾರೆ ಎಂದು ಸುದ್ದಿ  ಫೇಸ್ ಬುಕ್ ಮೆಸೆಂಜರ್ ನಲ್ಲಿ ಹರಿದಾಡುತ್ತಿದೆ. ಎನ್.ಆರ್. ರಮೇಶ್​ಗೆ ಟಿಕೆಟ್ ಕೈತಪ್ಪಿದ್ದರ  ಹಿಂದೆ ಆರ್​.ವಿ.ದೇವರಾಜ್ ಕೈವಾಡ ಇದೆ ಎನ್ನುವ ಆರೋಪ ಕೇಳಿ ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ: ಅಹವಾಲು ಹೇಳಲು ಚೇಂಬರ್‌ಗೆ ಬಂದ ರೈತರನ್ನು ಅವಮಾನಿಸಿದ ಸಚಿವ ಮಧು ಬಂಗಾರಪ್ಪ
ಜೀವ ವಿಮೆಗಾಗಿ ಜೀವ ತೆಗೆದ: ಲಿಫ್ಟ್ ಕೇಳಿದ್ದೇ ತಪ್ಪಾಯ್ತು: ಹಂತಕ ಸಿಕ್ಕಿಬಿದ್ದಿದ್ದು ಹೇಗೆ?