
ಬೆಂಗಳೂರು : ಲೋಕಸಭಾ ಚುನಾವಣೆ ಇನ್ನೇನು ಸಮೀಪಿಸುತ್ತಿದ್ದು, ಗೆಲುವಿಗಾಗಿ ಬಿಜೆಪಿ ಮಾಸ್ಟರ್ ಪ್ಲಾನ್ ಒಂದನ್ನು ಹೆಣೆಯುತ್ತಿದೆ.
ಲೋಕಸಭಾ ಚುನಾವಣೆಯಲ್ಲಿ ಸುಮಾರು 70 ಮಂದಿ ಪ್ರಖ್ಯಾತರನ್ನು ಕಣಕ್ಕಿಳಿಸುವ ಪ್ಲಾನ್ ನಲ್ಲಿದೆ. ವಿಶ್ವದಾದ್ಯಂತ ಚಿರಪರಿಚಿತರು ಎನಿಸಿಕೊಂಡ ಸಿನಿಮಾ ತಾರೆಯರು, ಕ್ರಿಕೆಟಿಗರತ್ತ ಕಣ್ಣು ನೆಟ್ಟಿದೆ.
ಪ್ರಮುಖವಾಗಿ ಬಾಲಿವುಡ್ ನಟ ಅಕ್ಷಯ್ ಕುಮಾರ್, ಸನ್ನಿ ಡಿಯೋಲ್, ಮೋಹನ್ ಲಾಲ್, ಮಾಧುರಿ ದೀಕ್ಷಿತ್, ವೀರೇಂದ್ರ ಸೇಹ್ವಾಗ್ ಅವರನ್ನು ಕಣಕ್ಕೆ ಇಳಿಸುವತ್ತ ಇದೀಗ ಬಿಜೆಪಿ ಚಿತ್ತ ಹರಿಸಿದೆ ಎನ್ನಲಾಗುತ್ತಿದೆ.
ಇನ್ನು ಸಿನಿಮಾ ಜಗತ್ತಿನಿಂದಲೇ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳಾಗುವ ಸಾಧ್ಯತೆ ಇದೆ. ಅಲ್ಲದೇ ಕಲೆ, ಕ್ರೀಡೆ, ಮಾಧ್ಯಮ, ಆರೋಗ್ಯ ವಿವಿಧ ಕ್ಷೇತ್ರಗಳ ಪ್ರಮುಖರಿಗೂ ಕೂಡ ಬಿಜೆಪಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಣೆ ಹಾಕುವ ಸಾಧ್ಯತೆ ಇದ್ದು, ಚಿರಪರಿಚಿತ ಮುಖಗಳ ಮೂಲಕ ಗೆಲುವಿನ ಪ್ಲಾನ್ ನಡೆದಿದೆ.
ನವದೆಹಲಿ ಕ್ಷೇತ್ರದಿಂದ ಅಕ್ಷಯ್ ಕುಮಾರ್ ಅವರನ್ನು ಮುಂಬೈನಿಂದ ಮಾಧುರಿ ದೀಕ್ಷಿತ್, ತಿರುವನಂತಪುರದಿಂದ ಮೋಹನ್ ಲಾಲ್ ಕಣಕ್ಕೆ ಇಳಿಯುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.