
ಅಗರ್ತಲಾ: ತ್ರಿಪುರದಲ್ಲಿ ಅಧಿಕಾರದ ಗದ್ದುಗೆ ಏರುವಲ್ಲಿ ಸಫಲವಾಗಿರುವ ಬಿಜೆಪಿ ಮತ್ತು ಐಪಿಎಫ್ಟಿ ಮೈತ್ರಿಕೂಟ, ತನ್ನ ಶಾಸಕಾಂಗ ಪಕ್ಷದ ನೂತನ ಆಯ್ಕೆ ಮಾಡಲು ಏ.6ರಂದು ಇಲ್ಲಿ ಸಭೆ ಸೇರಲಿದೆ.
ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಸಭೆಯ ವೀಕ್ಷಕರಾಗಿ ಆಗಮಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ ಬಿಪ್ಲಬ್ ದೇಬ್ ಅವರು ಭಾನುವಾರ ಈ ವಿಷಯ ಪ್ರಕಟಿಸಿದರು.
60 ಸದಸ್ಯಬಲದ ತ್ರಿಪುರ ವಿಧಾನಸಭೆಗೆ ನಡೆದ ಚುನಾವಣೆ ವೇಳೆ ಬಿಜೆಪಿಯ 35 ಮತ್ತು ಐಪಿಎಫ್ಟಿಯ 8 ಶಾಸಕರು ಆಯ್ಕೆಯಾಗಿದ್ದರು.
ಸದ್ಯದ ಲೆಕ್ಕಾಚಾರದ ಪ್ರಕಾರ ಬಿಜೆಪಿ ರಾಜ್ಯಾಧ್ಯಕ್ಷ ಬಿಪ್ಲಬ್ ದೇವ್ ಅವರೇ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗುವ ಮೂಲಕ ರಾಜ್ಯದ ನೂತನ ಮುಖ್ಯಮಂತ್ರಿಯಾಗುವುದು ಖಚಿತವಾಗಿದೆ. ಸಿಪಿಎಂ ಅಭ್ಯರ್ಥಿಯೊಬ್ಬರ ನಿಧನದಿಂದಾಗಿ ಒಂದು ಕ್ಷೇತ್ರಕ್ಕೆ ಚುನಾವಣೆ ನಡೆದಿರಲಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.