ರಾಜ್ಯ ಬಿಜೆಪಿಗೆ ಮತ್ತೊಂದು ಶಾಕ್?

Published : Sep 12, 2018, 10:13 AM ISTUpdated : Sep 19, 2018, 09:23 AM IST
ರಾಜ್ಯ ಬಿಜೆಪಿಗೆ ಮತ್ತೊಂದು ಶಾಕ್?

ಸಾರಾಂಶ

ಗೆಲ್ಲುವ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಇದೀಗ ನಿರಾಸೆ ಮೂಡಿದೆ. ವಿಧಾನಪರಿಷತ್‌ನ ಖಾಲಿ ಸ್ಥಾನಗಳಿಗೆ ಉಪಚುನಾವಣೆ ನಿಗದಿಯಾಗಿದ್ದು, 3 ಸ್ಥಾನಗಳು ಆಡಳಿತಾರೂಢ ಮೈತ್ರಿಗಳ ಪಕ್ಷದ ಪಾಲಾಗುವ ಸಾಧ್ಯತೆ ಗೋಚರಿಸಿದೆ. ಈ ನಿಟ್ಟಿನಲ್ಲಿ ಹಾಲಿ ಇರುವ ನಿಯಮದ ಬಗ್ಗೆ ಚುನಾವಣಾಧಿಕಾರಿಗಳಿಗೆ ವಿಪಕ್ಷ ಬಿಜೆಪಿ ದೂರು ನೀಡಲು ಮುಂದಾಗಿದೆ.

ಬೆಂಗಳೂರು :  ವಿಧಾನಪರಿಷತ್‌ನ ಖಾಲಿ ಸ್ಥಾನಗಳಿಗೆ ಉಪಚುನಾವಣೆ ನಿಗದಿಯಾದ ಬೆನ್ನಲ್ಲೇ ಎಲ್ಲಾ ಮೂರು ಸ್ಥಾನಗಳು ಆಡಳಿತಾರೂಢ ಮೈತ್ರಿಗಳ ಪಕ್ಷದ ಪಾಲಾಗುವ ಸಾಧ್ಯತೆ ಗೋಚರಿಸಿದ್ದು, ಹಾಲಿ ಇರುವ ನಿಯಮದ ಬಗ್ಗೆ ಚುನಾವಣಾಧಿಕಾರಿಗಳಿಗೆ ವಿಪಕ್ಷ ಬಿಜೆಪಿ ದೂರು ನೀಡಲು ಮುಂದಾಗಿದೆ.

ಒಮ್ಮೆಗೆ ಮೂರು ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಿಸಿದ ಆಯೋಗವು, ಒಂದೇ ದಿನ ಚುನಾವಣೆ ನಡೆಸಲಿದೆ. ಇದರಿಂದ ಸಹಜವಾಗಿ ಅಗತ್ಯ ಶಾಸಕರ ಬಲ ಹೊಂದಿರುವ ಮೈತ್ರಿ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಅವಕಾಶವಿದೆ. ಹೀಗಾಗಿ ತನ್ನ ಶಾಸಕರ ಬಲದಿಂದ ಒಂದು ಸ್ಥಾನವನ್ನಾದರೂ ಗೆಲ್ಲುವ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ನಿರಾಸೆ ಮೂಡಿಸಿದೆ.

ಈ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಮೂರು ಅಭ್ಯರ್ಥಿಗಳಿಗೂ ಪ್ರತ್ಯೇಕವಾಗಿ ಮತದಾನದ ಬದಲಿಗೆ ಒಬ್ಬ ಶಾಸಕ, ಒಬ್ಬರಿಗೆ ಮಾತ್ರ ಮತಹಕ್ಕು ಚಲಾವಣೆಗೆ ಅವಕಾಶ ಕೊಡಬೇಕು. ಆಗ ಮೂರು ಸ್ಥಾನಗಳು ಮೈತ್ರಿ ಪಕ್ಷದ ಪಾಲಾಗುವುದಿಲ್ಲ. ಆದರೆ ಈ ನಿಯಮ ಬದಲಾವಣೆ ಅಷ್ಟುಸುಲಭವಾಗಿಲ್ಲ ಎಂದು ಮೂಲಗಳು ಹೇಳಿವೆ.

ವಿಧಾನಸಭೆಯಿಂದ ವಿಧಾನಪರಿಷತ್‌ ಆಯ್ಕೆಗೆ ಈ ಚುನಾವಣೆ ನಡೆಯುತ್ತಿದೆ. ಈ ತಾಂತ್ರಿಕ ‘ಸಮಸ್ಯೆ’ ನಿವಾರಣೆಗೆ ಕೋರಿ ಚುನಾವಣೆ ಅಧಿಕಾರಿಗಳಿಗೆ ಬಿಜೆಪಿ ಕೋರಿಕೆ ಸಲ್ಲಿಸಲಿದೆ. ಇತ್ತ ತನ್ನ ಬುಟ್ಟಿಗೆ ಸುಲಭವಾಗಿ ಪರಿಷತ್‌ ಸದಸ್ಯ ಸ್ಥಾನಗಳು ಬಿದ್ದಿದ್ದರೂ ಈಗಿನ ರಾಜಕೀಯ ಮೇಲಾಟದಲ್ಲಿ ಹುರಿಯಾಳುಗಳ ಒಮ್ಮತದ ಆಯ್ಕೆಯೂ ಮಿತ್ರ ಪಕ್ಷಗಳಿಗೆ ಸವಾಲು ಉಂಟುಮಾಡಬಹುದು.

ಸದ್ಯ ಕಾಂಗ್ರೆಸ್‌ ಪಕ್ಷದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಜೊತೆಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ವಿದೇಶ ಪ್ರವಾಸದಿಂದ ಬರಬೇಕಿದೆ. ಹೀಗಾಗಿ ಸಿದ್ದರಾಮಯ್ಯ ಅವರು ಬಂದ ನಂತರ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಆರಂಭವಾಗಲಿದೆ. ಈ ಬಗ್ಗೆ ಮೂರೂ ಪಕ್ಷಗಳಲ್ಲಿ ಇನ್ನು ಮೇಲಷ್ಟೇ ಚರ್ಚೆ ನಡೆಯಬೇಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೊಂಡಿ ಬೀಚ್‌ನಲ್ಲಿ ಯಹೂದಿಯರ ಹಬ್ಬದಲ್ಲಿ ರಕ್ತಪಾತಗೈದ ಹಂತಕ ಭಾರತೀಯ ಮುಸ್ಲಿಂ: ಹೈದರಾಬಾದ್ ಓಲ್ಡ್ ಸಿಟಿಯಿಂದ ವಲಸೆ ಹೋದವ
'ಮಾದೇಶ್ವರ ದಯಬಾರದೆ..' ಯೂಟ್ಯೂಬ್‌ನಲ್ಲಿ ಟ್ರೆಂಡ್‌ ಆದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದಪ್ರಸಾದ್‌ ಹಾಡು!