ಮಹಾರಾಷ್ಟ್ರದಲ್ಲಿ ಬಿಜೆಪಿ ಜಯಭೇರಿ; ಶಿವಸೇನೆ, ಕಾಂಗ್ರೆಸ್ ತತ್ತರ

Published : Jan 09, 2017, 01:57 PM ISTUpdated : Apr 11, 2018, 01:08 PM IST
ಮಹಾರಾಷ್ಟ್ರದಲ್ಲಿ ಬಿಜೆಪಿ ಜಯಭೇರಿ; ಶಿವಸೇನೆ, ಕಾಂಗ್ರೆಸ್ ತತ್ತರ

ಸಾರಾಂಶ

ಮಹಾರಾಷ್ಟ್ರದಲ್ಲಿ ಈ ಮೊದಲು ನಡೆದ ಮೊದಲ ಮೂರು ಹಂತದ ಚುನಾವಣೆಗಳಲ್ಲೂ ಬಿಜೆಪಿ ಗೆಲುವು ಪಡೆದಿತ್ತು.

ನಾಗಪುರ(ಜ. 09): ಮಹಾರಾಷ್ಟ್ರದ ನಾಲ್ಕನೇ ಹಾಗೂ ಅಂತಿಮ ಹಂತದ ನಗರಪಾಲಿಕೆ ಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ. ನಾಗಪುರ ಮತ್ತು ಗೋಂಡ್ಯಾ ಜಿಲ್ಲೆಗಳಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ನಂಬರ್ ಒನ್ ಸ್ಥಾನ ಗಳಿಸಿದೆ. 192 ನಗರಾಧ್ಯಕ್ಷ ಸ್ಥಾನಗಳ ಪೈಕಿ ಬಿಜೆಪಿ 78ರಲ್ಲಿ ಗೆಲುವು ಪಡೆದಿದೆ. ಕಾಂಗ್ರೆಸ್ 36, ಶಿವಸೇನೆ 26 ಸ್ಥಾನಗಳಿಗೆ ತೃಪ್ತಿಪಟ್ಟಿವೆ. ಎನ್'ಸಿಪಿ 21 ಸ್ಥಾನ ಗಳಿಸಿದರೆ, ಇತರರಿಗೆ 31 ಸ್ಥಾನಗಳು ಹೋಗಿವೆ.

ಇನ್ನು, ನಗರಸೇವಕ ಕ್ಷೇತ್ರಗಳ ಪೈಕಿ ಬಿಜೆಪಿ 1,207 ಸ್ಥಾನ ಗಳಿಸಿ ಅಗ್ರಗಣ್ಯನೆನಿಸಿದೆ. ಕಾಂಗ್ರೆಸ್ 919, ಶಿವಸೇನೆ 616 ಮತ್ತು ಎನ್'ಸಿಪಿ 788 ಸ್ಥಾನಗಳನ್ನು ಪಡೆದಿವೆ.

ಕಾಂಗ್ರೆಸ್ ಮತ್ತು ಎನ್'ಸಿಪಿಯ ಭದ್ರಕೋಟೆ ಎನಿಸಿದ ನಾಗಪುರ ಮತ್ತು ಗೊಂಡ್ಯಾ ಜಿಲ್ಲೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಅಚ್ಚರಿ ಹುಟ್ಟಿಸಿದೆ. ನರೇಂದ್ರ ಮೋದಿ ಸರಕಾರದ ನೋಟು ಅಮಾನ್ಯ ಕ್ರಮದ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಈ ಚುನಾವಣಾ ಫಲಿತಾಂಶ ಬಂದಿರುವುದು ಕುತೂಹಲ ಮೂಡಿಸಿದೆ. ಕೇಂದ್ರ ಸರಕಾರದ ಕ್ರಮದ ಪರವಾಗಿ ಇದು ಬಂದಿರುವ ಜನಾದೇಶವೆಂದು ಭಾರತೀಯ ಜನತಾ ಪಕ್ಷ ಹೇಳಿಕೊಂಡಿದೆ.

ಕೇಂದ್ರದ ಕ್ರಮವನ್ನು ಮಿತ್ರಪಕ್ಷವೆನಿಸಿದ ಶಿವಸೇನೆ ಕೂಡ ವಿರೋಧಿಸಿದೆ. ಆದರೆ, ನಗರಪಾಲಿಕೆ ಚುನಾವಣೆಯಲ್ಲಿ ಶಿವಸೇನೆಗೂ ಹಿನ್ನಡೆಯಾಗಿರುವುದು ಇಲ್ಲಿ ಗಮನಾರ್ಹ. ಮಹಾರಾಷ್ಟ್ರದಲ್ಲಿ ಈ ಮೊದಲು ನಡೆದ ಮೊದಲ ಮೂರು ಹಂತದ ಚುನಾವಣೆಗಳಲ್ಲೂ ಬಿಜೆಪಿ ಗೆಲುವು ಪಡೆದಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವೇದಿಕೆಯಲ್ಲಿ ವಧು ಸದ್ದಿಲ್ಲದೆ ಮಾಡಿದ ಅದೊಂದು ಕೆಲಸ ಇಂಟರ್‌ನೆಟ್‌ನಲ್ಲಿ ಫುಲ್ ವೈರಲ್ ಆಯ್ತು..
ಹೆದ್ದಾರಿಯಲ್ಲಿ ಇಳಿದು ಕಾರಿಗೆ ಡಿಕ್ಕಿ ಹೊಡೆದ ವಿಮಾನ: ವೀಡಿಯೋ