
ಹೈದರಾಬಾದ್, [ನ.08]: ಬಿಜೆಪಿ ಟೀಕಿಸುವ ಭರದಲ್ಲಿ ಸಂಸದ ಅಸಾದುದ್ದೀನ್ ಓವೈಸಿ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ತೆಲಂಗಾಣ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತಾಡಿದ ಓವೈಸಿ, ಮೋದಿ ನೇತೃತ್ವದ ಆಡಳಿತದಲ್ಲಿ ಅಲ್ಪಸಂಖ್ಯಾತ ಸಮುದಾದವರನ್ನು ಬೆದರಿಸುವ ಪ್ರಯತ್ನ ನಡೆಯುತ್ತಿದ್ದು, ಬಿಜೆಪಿ ಮುಸ್ಲಿಂ ಮುಕ್ತ ಭಾರತ ಮಾಡಲು ಹೊರಟಿದೆ ಎಂದು ಆರೋಪಿಸಿದರು.
ಇತ್ತೀಚೆಗೆ ತೆಲಂಗಾಣಕ್ಕೆ ಬಂದಿದ್ದ ಅಮಿತ್ ಶಾ, ಮಜ್ಲಿಸ್ ಮುಕ್ತ ಹೈದರಾಬಾದ್ ಮಾಡುತ್ತೇನೆ ಎಂದಿದ್ದಾರೆ. ಅಮಿತ್ ಶಾ ಜೀ.. ನೀವು ಮಜ್ಲಿಸ್ ಮುಕ್ತ ಮಾಡುವ ಧ್ಯೇಯ ಹೊಂದಿಲ್ಲ. ಬದಲಿಗೆ ಮುಸ್ಲಿಂ ಮುಕ್ತ ಭಾರತ ಮಾಡುವ ಧ್ಯೇಯ ಹೊಂದಿದ್ದೀರಾ ಎಂದು ಅಮಿತ್ ಶಾ ವಿರುದ್ಧ ಕಿಡಿಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ