ಉತ್ತರ ಕರ್ನಾಟಕದ ಪರ ಬಿಜೆಪಿ ಹೋರಾಟ ಶುರು

Published : Dec 15, 2018, 09:56 AM IST
ಉತ್ತರ ಕರ್ನಾಟಕದ ಪರ ಬಿಜೆಪಿ ಹೋರಾಟ ಶುರು

ಸಾರಾಂಶ

ಅನ್ಯಾಯದ ವಿರುದ್ಧ  ಸದನದ ಒಳಗೆ, ಹೊರಗೆ ಪ್ರತಿಭಟನೆ ಮಾಡುತ್ತೇವೆ: ಯಡಿಯೂರಪ್ಪ | ಸರ್ಕಾರದಿಂದ ತಾರತಮ್ಯ ನೀತಿ ಖಂಡಿಸಿ ಆಕ್ರೋಶ | ಉತ್ತರ ಕರ್ನಾಟಕ ಪರ ಬಿಜೆಪಿ ಹೋರಾಟ ಶುರು 

ಬೆಳಗಾವಿ (ಡಿ. 15): ರಾಜ್ಯ ಸಮ್ಮಿಶ್ರ ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಸೋಮವಾರದಿಂದ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸುವುದಾಗಿ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಶುಕ್ರವಾರ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರವು ಬರದಿಂದ ನರಳಿರುವ ಉತ್ತರ ಕರ್ನಾಟಕದ ಜನತೆಗೆ ಅಗತ್ಯ ನೆರವು ನೀಡಲು ಮುಂದಾಗುತ್ತಿಲ್ಲ. ಈ ಬಗ್ಗೆ ನಿರ್ಲಕ್ಷ್ಯ ವಹಿಸಿ ತಾರತಮ್ಯ ನೀತಿ ಅನುಸರಿಸುತ್ತಿದೆ. ಈ ಕುರಿತು ಬಿಜೆಪಿ ಸದನದ ಒಳಗೆ ಹಾಗೂ ಹೊರಗೆ ಹೋರಾಟ ನಡೆಸಲಿದೆ ಎಂದರು.

ವಿಚಿತ್ರವೆಂದರೆ, ಈ ಸರ್ಕಾರ ಕೆಆರ್‌ಎಸ್‌ನಲ್ಲಿ ಡಿಸ್ನಿಲ್ಯಾಂಡ್ ಮಾಡಲು ಹೊರಟಿದೆ. ಉತ್ತರ ಕರ್ನಾಟಕ ಭಾಗದಲ್ಲಿ ನೀರಾವರಿ ಯೋಜನೆಯ ಹಲವಾರು ಕಾಮಗಾರಿಗಳು ಪೂರ್ಣಗೊಳ್ಳದೆ ಬಾಕಿ ಉಳಿದಿವೆ. ಆದರೆ, ಈ ಬಗ್ಗೆ ಸರ್ಕಾರಕ್ಕೆ ಆಸ್ಥೆಯಿಲ್ಲ. ಬದಲಾಗಿ, ಕೆಆರ್‌ಎಸ್‌ನಲ್ಲಿ 1500 ಕೋಟಿ ರು.ಗಳನ್ನು ವೆಚ್ಚ ಮಾಡಿ ಡಿಸ್ನಿ ಲ್ಯಾಂಡ್ ಮಾಡಲು ಹೊರಟಿದೆ. ಅಂದರೆ, ಸಮ್ಮಿಶ್ರ ಸರ್ಕಾರಕ್ಕೆ ಯಾವುದು ಮೊದಲ ಆದ್ಯತೆ ಎನ್ನುವುದು ಗೊತ್ತಾಗುತ್ತಿಲ್ಲವೇ ಎಂದು ಅವರು ಪ್ರಶ್ನಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶ್ರೀರಾಮ ಹಿಂದು ಅಲ್ಲ, ಆತ ಮುಸ್ಲಿಂ ಎಂದ ಟಿಎಂಸಿ ಶಾಸಕ, ಬಿಜೆಪಿ ತಿರುಗೇಟು!
ಎರಡು ಕುಟುಂಬಗಳ ನಡುವಿನ ಕಲಹ ಕೊಲೆಯಲ್ಲಿ ಅಂತ್ಯ: ದೇಹದಲ್ಲಿತ್ತು 69 ಬುಲೆಟ್