‘ಮೈತ್ರಿ ಬಣದಲ್ಲಿ 20 ಅತೃಪ್ತ ಶಾಸಕರು : ಬಿಜೆಪಿಗೆ ಹೆಚ್ಚಲಿದೆ ಸಂಖ್ಯಾಬಲ’

Published : May 10, 2019, 11:15 AM IST
‘ಮೈತ್ರಿ ಬಣದಲ್ಲಿ 20 ಅತೃಪ್ತ ಶಾಸಕರು : ಬಿಜೆಪಿಗೆ ಹೆಚ್ಚಲಿದೆ ಸಂಖ್ಯಾಬಲ’

ಸಾರಾಂಶ

ಮೈತ್ರಿ ಪಕ್ಷದಲ್ಲಿ 20 ಅತೃಪ್ತ  ಶಾಸಕರಿದ್ದು, ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ ಆಗಲಿದೆ ಎಂದು ಬಿಜೆಪಿ ನಾಯಕ ಭವಿಷ್ಯ ನುಡಿದಿದ್ದಾರೆ. 

ಹುಬ್ಬಳ್ಳಿ :  ರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದ್ದು,  ಭ್ರಷ್ಟಾಚಾರದ ಹಣದಿಂದ ಗೆಲುವು ಪಡೆಯುವುದು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮೈತ್ರಿ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಇದೇ ವೇಳೆ ಡಿ.ಕೆ.ಶಿವಕುಮಾರ್ ವಿರುದ್ಧವೂ ವಾಗ್ದಾಳಿ ನಡೆಸಿದ್ದು, ಅವರು ಬೇಜವಾಬ್ದಾರಿ ಹೇಳಿಕೆ ನೀಡುವುದು ನಿಲ್ಲಿಸಬೇಕು ಎಂದರು. ಅಲ್ಲದೇ ಮೈತ್ರಿ ಸರ್ಕಾರದಲ್ಲಿ ಈಗಾಗಲೇ ಆಂತರಿಕ ಕಚ್ಚಾಟ ಆರಂಭವಾಗಿದ್ದು, ಮತ್ತೆ ಅಪ್ಪ ಮಗ ರೆಸಾರ್ಟ್ ಸೇರಿದ್ದಾರೆ. ಸೋಲಿನ ಭಯದಿಂದ ದೇವೇಗೌಡ, ಕುಮಾರಸ್ವಾಮಿ ಕಂಗಾಲಾಗಿದ್ದಾರೆ ಎಂದರು. 

ಮಂಡ್ಯದಲ್ಲಿ ನಿಖಿಲ್ ಗೆ ಈಗ ಹೊಸ ಜವಾಬ್ದಾರಿ

ಇನ್ನು ರಾಜ್ಯದಲ್ಲಿ ಉಪ ಚುನಾವಣೆ ಬಳಿಕ ಬಿಜೆಪಿ ಸಂಖ್ಯಾಬಲ 106 ಆಗಲಿದೆ. ಮೂವರು ಪಕ್ಷೇತರರು ಬೆಂಬಲ ನೀಡುತ್ತಾರೆ. ಈಗಾಗಲೇ ರಾಜ್ಯದ ಮೈತ್ರಿ ಪಕ್ಷಗಳ 20ಕ್ಕೂ ಹೆಚ್ಚು ಶಾಸಕರು ಅತೃಪ್ತಿ ಹೊಂದಿದ್ದಾರೆ.  ಇದರಿಂದ ಬಿಜೆಪಿ ಸರ್ಕಾರ ಮತ್ತೆ ಅಸ್ತಿತ್ವಕ್ಕೆ ಬರುವ ವಾತಾವರಣ ನಿರ್ಮಾಣವಾಗುತ್ತಿದೆ. 

 ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಯಡಿಯೂರಪ್ಪ ಭರವಸೆ ಮಾತನಾಡಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೋದಿ-ಪುಟಿನ್‌ ಸೆಲ್ಫಿ ತೋರಿಸಿ ಟ್ರಂಪ್‌ ವಿರುದ್ಧ ಸಂಸದೆಯ ಕಿಡಿ
ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ