‘ಆಷಾಢದ ನಂತರ ಬಿಜೆಪಿ ಸರ್ಕಾರ’

Published : Jul 02, 2019, 10:18 AM IST
‘ಆಷಾಢದ ನಂತರ ಬಿಜೆಪಿ ಸರ್ಕಾರ’

ಸಾರಾಂಶ

ಈಗಾಗಲೇ ಮೈತ್ರಿ ಕೂಟದಲ್ಲಿ ರಾಜೀನಾಮೆ ಪರ್ವ ಆರಂಭವಾಗಿದ್ದು, ಆಷಾಢದ ಬಳಿಕ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಭವಿಷ್ಯ ನುಡಿಯಲಾಗಿದೆ. 

ಮಂಡ್ಯ [ಜು.2] :  ಆಷಾಢದ ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂದು ಶಾಸಕ, ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ್‌ ಸೋಮವಾರ ದೃಢವಾಗಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಆರ್‌.ಅಶೋಕ್‌ ಬಿಜೆಪಿಯಿಂದ ಆಪರೇಷನ್‌ ಕಮಲ ನಡೆಸುವುದಿಲ್ಲ. ಆದರೆ, ರಾಜ್ಯದ ಮೈತ್ರಿ ಸರ್ಕಾರದ ಎರಡೂ ಪಕ್ಷಗಳ ನಡುವೆ ತಾರತಮ್ಯ- ಕಂದಕ ಹೆಚ್ಚಾಗಿದೆ. ಹೀಗಾಗಿ ಮೈತ್ರಿ ಸರ್ಕಾರ ತಾನಾಗಿಯೇ ಸರಕಾರ ತನಗೆ ತಾನೇ ಪತನಗೊಳ್ಳಲಿದೆ ಎಂದರು.

ಮುಖ್ಯಮಂತ್ರಿ ಕುಮಾರಸ್ವಾಮಿ ನಡವಳಿಕೆಯಿಂದ ಎಲ್ಲರೂ ಬೇಸತ್ತಿದ್ದಾರೆ. ಕಾಂಗ್ರೆಸ್‌ನಂತೂ ಅಸಹಕಾರ, ಅಸಹನೆ ಗುಂಪುಗಾರಿಕೆ ಹೆಚ್ಚಾಗಿದೆ. ಜೆಡಿಎಸ್‌ ಮತ್ತು ಕಾಂಗ್ರೆಸ್‌ ಶಾಸಕರ ನಡುವಿನ ತಾರತಮ್ಯ ಎದ್ದುಕಾಣುತ್ತಿದೆ. ಈ ತಾರತಮ್ಯ ಸಹಿಸದ ಅತೃಪ್ತ ಶಾಸಕರು ರಾಜೀನಾಮೆ ನೀಡುವ ಹಾದಿಯಲ್ಲಿದ್ದಾರೆ. ಶಾಸಕ ಆನಂದ್‌ಸಿಂಗ್‌ ರಾಜೀನಾಮೆ ನೀಡುವುದರ ಮೂಲಕ ಪರ್ವ ಆರಂಭಿಸಿದ್ದಾರೆ. ಮುಂದಿನ ಒಂದು ವಾರದಲ್ಲಿ ನಿರೀಕ್ಷೆ ಮಾಡಲಾಗದಷ್ಟು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಅಶೋಕ್‌ ಹೊಸ ಬಾಂಬ್‌ ಸಿಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!
ದ್ವೇಷ ಭಾಷಣ ತಡೆಗೆ ಹೊಸ ಕಾನೂನು: ಈ ಕಾಯ್ದೆ ತರ್ತಿರೋ ಟಾರ್ಗೆಟ್ ನಾನೇ ಎಂದ ಯತ್ನಾಳ್!