
ಲಖ್ನೋ : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಎಸ್ ಪಿ - ಹಾಗೂ ಬಿಎಸ್ ಪಿ ಮೈತ್ರಿ ಬಗ್ಗೆ ಪ್ರಸ್ತಾಪಿಸಿದ್ದಾರೆ. ಅಲ್ಲದೇ 2019ನೇ ಸಾಲಿನ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಕೂಡ ಹೇಳಿದ್ದಾರೆ.
ಅಲ್ಲದೇ ಬಿಎಸ್ ಪಿ ಹಾಗೂ ಎಸ್ ಪಿ ನಡುವಿನ ಮೈತ್ರಿಯು ಸೂಕ್ತ ರೀತಿಯ ನೇತೃತ್ವ ಇಲ್ಲದ್ದು. ಅವರು ಮೊದಲು ಯಾರು ಯಾರ ಅಡಿಯಲ್ಲಿ ಕೆಲಸ ಮಾಡಬೇಕು ಎನ್ನುವುದು ನಿರ್ಧರಿಸಿಕೊಂಡರೆ ಒಳಿತು. ಅಖಿಲೇಶ್ ಯಾದವ್ ಮಾಯಾವತಿ ಅವರ ನೇತೃತ್ವದಲ್ಲಿ ಕೆಲಸ ಮಾಡುತ್ತಾರೋ ಅಥವಾ ಮಾಯಾವತಿ ಅಖಿಲೇಶ್ ಯಾದವ್ ನೇತೃತ್ವದಲ್ಲಿ ಕೆಲಸ ಮಾಡುತ್ತಾರೋ..? ಅಥವಾ ರಾಹುಲ್ ಗಾಂಧೀ ಇವರ ನೇತೃತ್ವವನ್ನು ಬಹಿಸುತ್ತಾರೋ ಎಂದು ಪ್ರಶ್ನೆ ಮಾಡಿದ್ದಾರೆ.
ಇನ್ನು ಬಿಹಾರ ರೀತಿಯ ಮಹಾ ಘಟ ಬಂಧನ ನಡೆದರೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು ಬಿಜೆಪಿಗೆ ಅವರು ಹೆದರಿ ಇಂತಹ ನಿರ್ಧಾರಗಳನ್ನು ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಭಾರಿಸಲಿದೆ ಎಂದು ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಅಲ್ಲದೇ ಇದೇ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ 75ಕ್ಕಿಂತಲೂ ಅಧಿಕ ಸ್ಥಾನಗಳನ್ನು ಬಿಜೆಪಿ ಪಡೆದುಕೊಳ್ಳುವುದು ಖಚಿತ ಎಂದು ಅವರು ಭರವಸೆ ವ್ಯಕ್ತಪಡಿಸಿದರು.
ಸಂಸತ್ ಕಲಾಪದ ವೇಳೆ ರಾಹುಲ್ ಗಾಂಧಿ ಪ್ರಧಾನಿಯನ್ನು ಅಪ್ಪಿಕೊಂಡ ಬಗ್ಗೆಯೂ ಮಾತನಾಡಿ ಅದೊಂದು ಅತ್ಯಂತ ಸಣ್ಣ ಮನಸ್ಥಿತಿಯ ವರ್ತನೆ ಎಂದು ಚಾಟಿ ಬೀಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.