
ಬೆಂಗಳೂರು (ಜ.02): ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಶಾಸಕರ ವಿರುದ್ಧ ಬಿಜೆಪಿ ಚಾರ್ಜ್ ಶೀಟ್ ಸಿದ್ಧ ಮಾಡಿಕೊಂಡಿದೆ. ಸಿಎಂ ಮತ್ತು ಕಾಂಗ್ರೆಸ್ ಶಾಸಕರಿಗೆ ಶಾಕ್ ನೀಡಲು ಬಿಜೆಪಿ ಸಿದ್ಧವಾಗಿದೆ.
"ಹೇಳಿದ್ದೇನು? ಮಾಡಿದ್ದೇನು?" ಶೀರ್ಷಿಕೆಯಡಿ ರಾಜ್ಯ ಕಾಂಗ್ರೆಸ್ ಸರ್ಕಾರಗಳ ವೈಫ್ಯಲ್ಯ, ಅಕ್ರಮಗಳ ಪಟ್ಟಿಯನ್ನು ಸಿದ್ಧ ಮಾಡಿದೆ. ವಿಧಾನಸಭಾ ಕ್ಷೇತ್ರಾವಾರು ಚಾರ್ಜ್ ಶೀಟ್ ರೆಡಿಯಾಗಿದ್ದು, ಪ್ರಧಾನಿ ಮೋದಿಯಿಂದ ಬಿಡುಗಡೆ ಮಾಡಿಸಲು ಬಿಜೆಪಿ ಸಿದ್ಧತೆ ನಡೆಸಿದೆ.
ವರಿಷ್ಠರ ಸೂಚನೆಯಂತೆ ರಾಜ್ಯ ಬಿಜೆಪಿ ಸಂಪೂರ್ಣ ತಯಾರಿ ಮಾಡಿಕೊಂಡಿದ್ದು ಜನವರಿ 28 ಕ್ಕೆ ಬೆಂಗಳೂರಿನಲ್ಲಿ ನಡೆಯಲಿರುವ ಪರಿವರ್ತನಾ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಕಾಂಗ್ರೆಸ್ ವಿರುದ್ಧ ಚಾರ್ಜ್ ಶೀಟ್ ಬಿಡುಗಡೆ ಮಾಡಲಿದೆ.
ಕಾಂಗ್ರೆಸ್ ಪಕ್ಷದ ಒಟ್ಟು 123 ಶಾಸಕರ ವಿರುದ್ಧ ಚಾರ್ಜ್ ಶೀಟ್ ಸಿದ್ಧವಾಗಿದ್ದು, ಇಡೀ ರಾಜ್ಯ ವ್ಯಾಪ್ತಿಗೆ ಸೇರಿದಂತೆ ಒಂದು ಚಾರ್ಜ್ ಶೀಟ್, ಪ್ರತೀ ಕಾಂಗ್ರೆಸ್ ಶಾಸಕರ ಕ್ಷೇತ್ರವಾರು ಪ್ರತ್ಯೇಕ ಚಾರ್ಜ್ ಶೀಟ್ ರೆಡಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.