
ಪಣಜಿ (ಮಾ.16): ಇಂದು ವಿಧಾನಸಭೆಯಲ್ಲಿ ನಡೆದ ಬಹುಮತ ಸಾಬೀತು ಕಲಾಪದಲ್ಲಿ 22 ಮತಗಳನ್ನು ಪಡೆಯುವ ಮೂಲಕ ಬಿಜೆಪಿ ಮುಂದಿನ 5 ವರ್ಷಗಳ ಅವಧಿಗೆ ಆಡಳಿತದ ಚುಕ್ಕಾಣಿಯನ್ನು ಭದ್ರಪಡಿಸಿಕೊಂಡಿದೆ.
ಬಿಜೆಪಿಗೆ ಬಹುಮತ ಸಾಬೀತು ಪಡಿಸಲು 20 ಮತಗಳ ಅಗತ್ಯವಿತ್ತು. ತಮ್ಮ16 ಮಂದಿ ಶಾಸಕರು ನೂತನ ಮುಖ್ಯಮಂತ್ರಿ ಪರ್ರಿಕರ್ ವಿರುದ್ಧ ಮತ ಚಲಾಯಿಸಿದರೆ, ಓರ್ವ ಶಾಸಕ ಗೈರು ಹಾಜರಾಗಿದ್ದರು.
ಗೋವಾ ಮುಖ್ಯಮಂತ್ರಿ ಗಾದಿಯನ್ನು ಪಡೆಯುವ ಸಲುವಾಗಿ ರಕ್ಷಣಾ ಸಚಿವ ಸ್ಥಾನಕ್ಕೆ ಪರ್ರಿಕರ್ ರಾಜಿನಾಮೆ ನೀಡಿದ್ದರು.
40 ಶಾಸಕರಿರುವ ವಿಧಾನಸಭೆಗೆ ಕಳೆದ ಚುನಾವಣೆಯಲ್ಲಿ ಬಿಜೆಪಿಗೆ ಕೇವಲ 13 ಸ್ಥಾನಗಳು ಬಂದಿವೆ. ಗೋವಾ ಫಾರ್ವರ್ಡ್ ಪಕ್ಷ ಹಾಗೂ ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷಗಳು ಬಿಜೆಪಿಗೆ ಬೆಂಬಲ ಸೂಚಿಸಿದ್ದವು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.