‘ಬಿಜೆಪಿ ಕಾರ್ಯಕರ್ತನದ್ದು ಕೊಲೆಯಲ್ಲ, ಆತ್ಮಹತ್ಯೆ’..!

Published : Jun 03, 2018, 04:27 PM IST
‘ಬಿಜೆಪಿ ಕಾರ್ಯಕರ್ತನದ್ದು ಕೊಲೆಯಲ್ಲ, ಆತ್ಮಹತ್ಯೆ’..!

ಸಾರಾಂಶ

ಪುರುಲಿಯಾದ ಬಿಜೆಪಿ ಕಾರ್ಯಕರ್ತ ದುಲಾಲ್ ಹತ್ಯೆ ಪ್ರಕರಣವನ್ನು ಭೇಧಿಸಿರುವ ಪೊಲೀಸರು, ದುಲಾಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಪಷ್ಟಪಡಿಸಿದ್ದಾರೆ.ಬಿಜೆಪಿ ಕಾರ್ಯಕರ್ತ ದುಲಾಲ್ ಅವರ ಮೃತದೇಹ ಹೈ ಟೆನ್ಶನ್ ವಿದ್ಯುತ್ ಕಂಬದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ಕೂಡ ಮಾಡಿತ್ತು.

ಕೋಲ್ಕತ್ತಾ(ಜೂ.3): ಪುರುಲಿಯಾದ ಬಿಜೆಪಿ ಕಾರ್ಯಕರ್ತ ದುಲಾಲ್ ಹತ್ಯೆ ಪ್ರಕರಣವನ್ನು ಭೇಧಿಸಿರುವ ಪೊಲೀಸರು, ದುಲಾಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತ ದುಲಾಲ್ ಅವರ ಮೃತದೇಹ ಹೈ ಟೆನ್ಶನ್ ವಿದ್ಯುತ್ ಕಂಬದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ಕೂಡ ಮಾಡಿತ್ತು.

ಆದರೆ ಪ್ರಕರಣದ ತನಿಖೆ ನಡೆಸಿದ ಪೊಲೀಸರು, ದುಲಾಲ್ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಕೊಲೆಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ದುಲಾಲ್ ಮರಣೋತ್ತರ ಪರೀಕ್ಷೆ ಬಳಿಕ ಇದೊಂದು ಆತ್ಮಹತ್ಯೆ ಎಂದು ಗೊತ್ತಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಆಕಾಶ್ ಮಾಘಾರಿಯಾ ತಿಳಿಸಿದ್ದಾರೆ. 

ಕಳೆದ ಬುಧವಾರ ಕೂಡ ಪುರುಲಿಯಾ ಜಿಲ್ಲೆಯ ಸುಪುರ್ಧಿ ಗ್ರಾಮದಲ್ಲಿ ತ್ರಿಲೋಚನ್ ಮಹತೋ ಎಂಬ ಯುವಕನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈತ ಕೂಡ ಬಿಜೆಪಿ ಕಾರ್ಯಕರ್ತನಾಗಿದ್ದ. ಈ ಎರಡೂ ಪ್ರಕರಣಗಳನ್ನು ರಾಜ್ಯಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ ಎಂದು ಮಾಘಾರಿಯಾ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

14 ವರ್ಷಗಳಲ್ಲಿ ಭಾರತೀಯ ಪೌರತ್ವ ತ್ಯಜಿಸಿದವರ ಸಂಖ್ಯೆ ಎಷ್ಟು? ಈ ವಲಸೆಗೆ ಏನು ಕಾರಣ?
ಚೈತ್ರಾ ಕುಂದಾಪುರಗೆ ಮತ್ತೊಮ್ಮೆ ಕಾನೂನು ಸಂಕಷ್ಟ; ಅಪ್ಪನ ವಿಚಾರಕ್ಕೆ ಬಿಗ್ ಬಾಸ್ ಮನೆಯಿಂದ ಹೊರ ಬರ್ತಾರಾ?