ಆಹಾ! ಏನ್ ಭಕ್ತಿ?: ಸಂಸದನ ಕಾಲು ತೊಳೆದು ನೀರು ಕುಡಿದ ಪುಣ್ಯಾತ್ಮ!

Published : Sep 17, 2018, 12:48 PM ISTUpdated : Sep 19, 2018, 09:28 AM IST
ಆಹಾ! ಏನ್ ಭಕ್ತಿ?: ಸಂಸದನ ಕಾಲು ತೊಳೆದು ನೀರು ಕುಡಿದ ಪುಣ್ಯಾತ್ಮ!

ಸಾರಾಂಶ

ಸಂಸದನ ಕಾಲು ತೊಳೆದು ನೀರು ಕುಡಿದ ಕಾರ್ಯಕರ್ತ! ಜಾರ್ಖಂಡ್‌ನ ಗೊಡ್ಡ ಜಿಲ್ಲೆಯಲ್ಲಿ ನಡೆದ ಘಟನೆ! ಗೊಡ್ಡ ಸಂಸದ ನಿಶಿಕಾಂತ್ ದುಬೆ ಕಾಲು ತೊಳೆದ ಪವನ್ ಸಿಂಗ್! ಸಂಸದರ ಕಾಲು ತೊಳೆದು ಅದೇ ನೀರನ್ನು ಸಾರ್ವಜನಿಕವಾಗಿ ಕುಡಿದ! ಪವನ್ ಸಿಂಗ್ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ

ಗೊಡ್ಡ, ಜಾರ್ಖಂಡ್(ಸೆ.17): ಸಾರ್ವಜನಿಕ ಕಾರ್ಯಕ್ರಮಕ್ಕೆ ಆಗಮಿಸಿದ್ದ ಬಿಜೆಪಿ ಸಂಸದರೊಬ್ಬರ ಕಾಲು ತೊಳೆದ ಪಕ್ಷದ ಕಾರ್ಯಕರ್ತನೊಬ್ಬ, ನಂತರ ಕಾಲು ತೊಳೆದ ನೀರು ಕುಡಿದ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ.  

ಜಾರ್ಖಾಂಡ್‌ನ ಗೊಡ್ಡ ಸಂಸದ ನಿಶಿಕಾಂತ್ ದುಬೆ ನಿನ್ನೆ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಸ್ಥಳದಲ್ಲಿದ್ದ ಕಾರ್ಯಕರ್ತ ಪವನ್ ಸಿಂಗ್ ಎಂಬಾತ ನಿಶಿಕಾಂತ್ ಅವರ ಪಾದ ತೊಳೆದು, ಪಾದವನ್ನು ಒರೆಸಿದ್ದಾರೆ. ಬಳಿಕ ಕಾಲು ತೊಳೆದ ನೀರನ್ನು ಕುಡಿದಿದ್ದಾರೆ.

ಘಟನೆಯ ವಿಡಿಯೋವನ್ನು ಸ್ವತಃ ನಿಶಿಕಾಂತ್ ಅವರೇ ತಮ್ಮ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ವಿಡಿಯೋ ನೋಡಿದ ಸಾರ್ವಜನಿಕರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಇನ್ನು ಪವನ್ ಕಾರ್ಯಕ್ಕೆ ಟೀಕೆ ವ್ಯಕ್ತವಾದ ಹಿನ್ನಲೆಯಲ್ಲಿ ಘಟನೆಯನ್ನು ಸಮರ್ಥಿಸಿಕೊಂಡಿರುವ ನಿಶಿಕಾಂತ್, ಇದೇನು ಅಂತಹ ದೊಡ್ಡ ವಿಚಾರವಲ್ಲ. ತಮ್ಮ ಇಚ್ಛೆಯಂತೆ ಅವರು ಕಾಲು ತೊಳೆದಿದ್ದಾರೆ. ಇದಕ್ಕೆ ರಾಜಕೀಯ ಬಣ್ಣವನ್ನೇಕೆ ನೀಡಲಾಗುತ್ತಿದೆ? ಅತಿಥಿಗಳ ಪಾದ ತೊಳೆಯುವುದರಲ್ಲಿ ತಪ್ಪೇನಿದೆ?ಮಹಾಭಾರತ ಕಥೆಗಳನ್ನು ಓದಿ ಎಂದು ತಿರುಗೇಟು ನೀಡಿದ್ದಾರೆ. 

ಇದೇ ವೇಳೆ ತಮ್ಮ ಜಾತಿ ಕುರಿತಂತೆ ಹೇಳಿಕೊಂಡಿರುವ ನಿಶಿಕಾಂತ್, ನಾನೊಬ್ಬ ಬ್ರಾಹ್ಮಣ ಎಂಬ ಸತ್ಯವನ್ನು ಹೇಗೆ ಬದಲಿಸಲು ಸಾಧ್ಯ? ಬ್ರಾಹ್ಮಣ ಕುಟುಂಬದಲ್ಲಿ ಹುಟ್ಟಿದ್ದಕ್ಕೆ ನನ್ನ ಪೋಷಕರನ್ನು ನಿಂದಿಸಬೇಕೆ? ಈ ಕಾರಣದಿಂದ ನನ್ನ ತಂದೆ-ತಾಯಿಯನ್ನು ಬದಲಿಸಬೇಕೆ? ಎಂದು ಪ್ರಶ್ನಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Uttara Kannada: ಆಸ್ಪತ್ರೆಗೆ ಹೋಗಿದ್ದ ಗರ್ಭಿಣಿ ಹುಟ್ಟುಹಬ್ಬದಂದೇ ಸಾವು; ಹೊಟ್ಟೆಯಲ್ಲೇ ಅಸುನೀಗದ ಮಗು!
ಯಕ್ಷಗಾನ ಕಲಾವಿದರ ಅಪಮಾನ: 'ಬಿಳಿಮಲೆಗೆ ಒಂದು ನೋಟಿಸ್ ಕೊಡೋಕೂ ಕಷ್ಟವೇ? ಸುನೀಲ್ ಕುಮಾರ್ ಪ್ರಶ್ನೆ, ಈ ವಿಷಯ ದೊಡ್ಡದು ಮಾಡೋದು ಬೇಡ ಎಂದ ತಂಗಡಗಿ