
ಚಿಕ್ಕಮಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ವಿಚಾರವಾಗಿ ಪ್ರಧಾನಿ ಮೋದಿ ಹಾಗೂ ಆರೆಸ್ಸೆಸ್ ವಿರುದ್ಧ ಹೇಳಿಕೆ ನೀಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ರಾಹುಲ್ ಗಾಂಧಿ ತಪ್ಪಿತಸ್ಥರೆಂದು ಸಾಬೀತಾದಲ್ಲಿ ಅವರು ಆರೆಸ್ಸೆಸ್’ನ ಕ್ಷಮೆಯಾಚಿಸಬೇಕೆಂದು ದೂರಿನಲ್ಲಿ ಹೇಳಲಾಗಿದೆ.
ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿದ್ದ ರಾಹುಲ್ ಗಾಂಧಿ ಪ್ರಧಾನಿ ಮೋದಿ ಹಾಗೂ ಸಂಘ ಪರಿವಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಭಿನ್ನಾಭಿಪ್ರಾಯಗಳನ್ನು ತುಳಿಯುವುದು ಪ್ರಧಾನಿ ಹಾಗೂ ಸಂಘ ಪರಿವಾರದ ನೀತಿಯಾಗಿದೆ. ಯಾರೆಲ್ಲಾ ಅವರ ಸಿದ್ಧಾಂತವನ್ನು ವಿರೋಧಿಸುತ್ತಾರೋ, ಅವರು ಹಿಂಸಿಸಲ್ಪಡುತ್ತಾರೆ, ಹಲ್ಲೆಗೊಳಗಾಗುತ್ತಾರೆ, ಕೊಲೆಯೂ ಆಗುತ್ತಾರೆ, ಎಂದು ರಾಹುಲ್ ಗಾಂಧಿ ಹೇಳಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.