ಡಿ.ಕೆ.ಶಿವಕುಮಾರ್ ಕಣ್ಣೀರಿಗೆ ಬಿಜೆಪಿಗರಿಂದ ವ್ಯಂಗ್ಯ

Published : Sep 03, 2019, 11:09 AM IST
ಡಿ.ಕೆ.ಶಿವಕುಮಾರ್ ಕಣ್ಣೀರಿಗೆ ಬಿಜೆಪಿಗರಿಂದ ವ್ಯಂಗ್ಯ

ಸಾರಾಂಶ

ಡಿಕೆ ಶಿವಕುಮಾರ್ ಅವರು ಸದ್ಯ ಅಕ್ರಮ ಹಣ ಸಂಗ್ರಹ ಪ್ರಕರಣದ ಅಡಿಯಲ್ಲಿ ಇಡಿ ವಶದಲ್ಲಿದ್ದು, ತಂದೆಯನ್ನು ನೆನೆದು ಕಣ್ಣಿರು ಹಾಕಿದ್ದರು. ಇದಕ್ಕೆ ಬಿಜೆಪಿಗರು ಟಾಂಗ್ ನೀಡಿದ್ದಾರೆ. 

ಬೆಂಗಳೂರು [ಸೆ.03]: ಅಕ್ರಮ ಹಣ ಸಂಗ್ರಹ ಪ್ರಕರಣದಲ್ಲಿ ಇಡಿ ವಶದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ತಮ್ಮ ತಂದೆಗೆ ಪೂಜೆ ಸಲ್ಲಿಸಲಾಗುತ್ತಿಲ್ಲ ಎಂದು ಕಣ್ಣೀರು ಹಾಕಿರುವುದಕ್ಕೆ ಬಿಜೆಪಿ ಕಾರ್ಯಕರ್ತರು ವ್ಯಂಗ್ಯವಾಡಿದ್ದಾರೆ. 

ಜನಾರ್ದನ ರೆಡ್ಡಿಗೆ ಹೋಲಿಕೆ ಮಾಡಿ ಟಾಂಗ್ ನೀಡಿದ್ದಾರೆ. ನೀವು ಕಣ್ಣೀರು ಹಾಕಿರುವುದನ್ನು ನೋಡಿ ಅಯ್ಯೋ ಎನಿಸಿತು ಎಂದು ಜನಾರ್ದನ ರೆಡ್ಡಿ ಅಭಿಮಾನಿಗಳು ಅಪಹಾಸ್ಯ ಮಾಡಿದ್ದಾರೆ. 

ನಮ್ಮ ನಾಯಕ ಜನಾರ್ದನ ರೆಡ್ಡಿ ಒಂದು ದಿನವೂ ಕಣ್ಣಿರು ಹಾಕಿರಲಿಲ್ಲ.  ರೆಡ್ಡಿ ಅವರನ್ನು ಕಾಂಗ್ರೆಸ್ ನವರು ಜೈಲಿಗೆ  ಕಳಿಸಿದ್ದರು. ಆದರೆ ಅವರು ಒಂದು ದಿನವೂ ಕಣ್ಣೀರು ಹಾಕದೇ ವಿಚಾರಣೆಗೆ ಸಹಕರಿಸಿದ್ದರು. ಕೋರ್ಟ್ ಮೂಲಕ ನ್ಯಾಯಾಂಗ ವ್ಯವಸ್ಥೆಗೆ ಗೌರವ ನೀಡಿದ್ದರು ಎಂದು ಟಾಂಗ್ ನೀಡಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರೆಡ್ಡಿ ಅವರನ್ನು ಮೂರುವರೆ ವರ್ಷಗಳ ಕಾಲ ಜೈಲಿನಲ್ಲಿ ಇರಿಸಲಾಗಿತ್ತು, ಇಷ್ಟಾದರೂ ಅವರು ಎಂದಿಗೂ ಕಣ್ಣೀರು ಸುರಿಸಿಲ್ಲ ಎಂದು ಬಿಜೆಪಿಗರು ಕಾಂಗ್ರೆಸ್ ಟ್ರಬಲ್ ಶೂಟರ್ ಎಂದೇ ಕರೆಸಿಕೊಳ್ಳುವ ಡಿಕೆಶಿ ಅವರಿಗೆ ಟಾಂಗ್ ನೀಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ
ಗಂಡ ಉಳಿಯಲಿಲ್ಲ, ಎಗ್ಸಾಂ ಬರೆಯಲಿಲ್ಲ, ಕ್ಯಾನ್ಸಲ್ ಆಗಿದ್ದು ಬರೀ ಫ್ಲೈಟ್ ಅಲ್ಲ ನೂರಾರು ಮಂದಿ ಕನಸು