
ಮಂಡ್ಯ [ಜೂ.13] : ಸಂಸದೆ ಸುಮಲತಾ ಅಂಬರೀಶ್ ಮಂಡ್ಯಕ್ಕೆ ಭೇಟಿ ನೀಡಿದ್ದು ಈ ವೇಳೆ ಇಲ್ಲಿನ ಬಿಜೆಪಿ ಹಾಗೂ ರೈತ ಸಂಘದ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದ್ದಾರೆ.
ಶಿವಕುಮಾರ ಸ್ವಾಮೀಜಿ ಮಹಾದ್ವಾರ ಉದ್ಘಾಟನೆಗಾಗಿ ಸಂಸದೆಯಾದ ಬಳಿಕ ಮೊಟ್ಟ ಮೊದಲ ಬಾರಿಗೆ ಮಂಡ್ಯ ತಾಲೂಕಿನ ಮಾಚೇನಹಳ್ಳಿಗೆ ಆಗಮಿಸುತ್ತಿದ್ದಂತೆ ಜೈಕಾರ ಹಾಕಿ. ಹಾರ ತುರಾಯಿ ಹಾಕಿ ಸ್ವಾಗತಿಸಿದರು.
ಇನ್ನು ಬಿ.ಎಸ್.ಯಡಿಯೂರಪ್ಪ, ನರೇಂದ್ರ ಮೋದಿ ಜೊತೆಗೆ ಸುಮಲತಾ ಅಂಬರೀಶ್ ಅವರ ಫೋಟೊ ಹಾಕಿರುವ ಫ್ಲೆಕ್ಸ್ ಗಳನ್ನು ಎಲ್ಲೆಡೆ ಹಾಕಿದ್ದು, ಬಿಜೆಪಿ ನಾಯಕರು ಹಳ್ಳಿಗೆ ಅವರನ್ನು ಬರಮಾಡಿಕೊಂಡರು.
ಈ ಹಿಂದೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿಯೂ ಕೂಡ ಸುಮಲತಾ ಅಂಬರೀಶ್ ಅವರಿಗೆ ಹಲವು ಬಿಜೆಪಿಗರು ಹಾಗೂ ಕಾಂಗ್ರೆಸ್ ನಾಯಕರು ಸುಮಲತಾ ಅಂಬರೀಶ್ ಅವರಿಗೆ ಬೆಂಬಲ ನೀಡಿದ್ದರು. ಬಿಜೆಪಿ ನಾಯಕರು ನೇರವಾಗಿಯೇ ಸುಮಲತಾಗೆ ಸಹಕಾರ ನೀಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.