‘ರಾಜ್ಯದಲ್ಲಿ ನಾಳೆ ಚುನಾವಣೆ ನಡೆದರೂ ಬಿಜೆಪಿಗೆ 175 ಸ್ಥಾನ’

Published : Jun 21, 2019, 11:47 AM ISTUpdated : Jun 21, 2019, 11:48 AM IST
‘ರಾಜ್ಯದಲ್ಲಿ ನಾಳೆ ಚುನಾವಣೆ ನಡೆದರೂ ಬಿಜೆಪಿಗೆ 175 ಸ್ಥಾನ’

ಸಾರಾಂಶ

ಲೋಕಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಹಲವು ರೀತಿಯ ರಾಜಕೀಯ ಬೆಳವಣಿಗಗಳಾಗುತ್ತಿವೆ. ಮಧ್ಯಂತರ ಚುನಾವಣೆ, ಮೈತ್ರಿ ಸರ್ಕಾರದ ಭವಿಷ್ಯದ ಬಗ್ಗೆ ಹಲವು ಚರ್ಚೆಗಳಾಗುತ್ತಿವೆ. 

ಮೈಸೂರು [ಜೂ.21] : ನಾಳೆ ಬೆಳಗ್ಗೆ ರಾಜ್ಯದಲ್ಲಿ ಚುನಾವಣೆ ನಡೆದರೂ ಕೂಡ ನಾವು 175 ಸೀಟು ಗೆಲ್ಲುತ್ತೇವೆ ಎಂದು ಬಿಜೆಪಿ ಶಾಸಕರೋರ್ವರು ಭವಿಷ್ಯ ನುಡಿದಿದ್ದಾರೆ. 

ಮೈಸೂರಿನಲ್ಲಿ ಮಾತನಾಡಿದ ಚಾಮರಾಜ ಕ್ಷೇತ್ರದ ಶಾಸಕ ನಾಗೇಂದ್ರ, ದೇವೇಗೌಡರು ಹೇಳಿರುವುದು ನೂರಕ್ಕೆ ನೂರು ಸತ್ಯ. ಮಧ್ಯಂತರ ಚುನಾವಣೆ ನಡೆಯುತ್ತದೆ ಎಂದು ಹೇಳಿದ್ದಾರೆ. ಆದರೆ ಈ ರೀತಿ ನಿರ್ಧಾರ ತೆಗೆದುಕೊಳ್ಳುವುದು ಅವರ ಕೈಯಲ್ಲಿ ಇಲ್ಲ. ಈ ಬಗ್ಗೆ ಒಬ್ಬರೆ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದರು. 

ಇನ್ನು ನಾಳೆಯೇ ಚುನಾವಣೆ ಚುನಾವಣೆ ನಡೆದರೂ ನಾವು 175 ಸ್ಥಾನ ಗೆಲ್ಲುವ ಸಾಮರ್ಥ್ಯ ಹೊಂದಿದ್ದೇವೆ. ಬಿಜೆಪಿಯನ್ನು ಅಧಿಕಾರದಿಂದ ದೂರು ಇಡಲು ಮೈತ್ರಿ ಮಾಡಿಕೊಂಡು ಆಡಳಿತ ನಡೆಸುತ್ತಿದ್ದಾರೆ ಎಂದು ಶಾಸಕರು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು. 

ಇನ್ನು ಜೆಡಿಎಸ್ ಕೇಳುವ ಮುನ್ನವೇ ಕೈ ನಾಯಕರೇ ಜೆಡಿಎಸ್ ಮನೆ ಬಾಗಿಲಿಗೆ ಹೋಗಿ ಬೆಂಬಲ ನೀಡಿದ್ದಾರೆ. ನೂರಾರು ವರ್ಷದ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ಎಂತಹ ಸ್ಥಿತಿ ಬಂದಿದೆ. 37 ಸ್ಥಾನ ಪಡೆದ ಜೆಡಿಎಸ್ ಬಾಗಿಲು ಬಡಿಯುವಂತಾಗಿದೆ ಎಂದರು. 

ಮಧ್ಯಂತರ ಚುನಾವಣೆ ರಾಜ್ಯದಲ್ಲಿ ನಡೆದಲ್ಲಿ ನಾವು ಸಿದ್ಧವಾಗಿದ್ದೇವೆ ಎಂದು ಬಿಜೆಪಿ ಶಾಸಕ ನಾಗೇಂದ್ರ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೋದಿ-ಪುಟಿನ್‌ ಸೆಲ್ಫಿ ತೋರಿಸಿ ಟ್ರಂಪ್‌ ವಿರುದ್ಧ ಸಂಸದೆಯ ಕಿಡಿ
ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ