
ಬೆಂಗಳೂರು(ಮಾ.11): ಲೋಕಾಯುಕ್ತರಿಗೆ ಚೂರಿ ಇರಿದ ವ್ಯಕ್ತಿಯ ತಲೆಯಲ್ಲಿ ದ್ವೇಷ, ಅಸೂಯೆ ತುಂಬಿದ ಮಾನಸಿಕ ಸ್ಥಿತಿ ಸೃಷ್ಟಿಗೆ ಬಿಜೆಪಿಯವರೇ ಕಾರಣ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ. ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ದೇಶಾದ್ಯಂತ ದ್ವೇಷ, ಅಸೂಯೆ ಹರಡಿಬಿಟ್ಟಿದ್ದಾರೆ.
ಜನರಿಗೆ ತಪ್ಪು ಸಂದೇಶ ನೀಡಿ ಕೋಮು ಗಲಭೆ ಸೃಷ್ಟಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಇದರ ಪರಿಣಾಮಕ್ಕೊಳಗಾಗಿ ಕೆಲವರು ಇಂತಹ ದುಷ್ಕೃತ್ಯಗಳನ್ನು ನಡೆಸುತ್ತಾರೆ ಎನಿಸುತ್ತಿದೆ ಎಂದು ಹೇಳಿದರು. ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ ಎನ್ನುತ್ತಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಮ್ಮ ಆಡಳಿತಾವಧಿಯಲ್ಲಿ ಕಾನೂನು-ಸುವ್ಯವಸ್ಥೆ ಹೇಗಿತ್ತೆಂದು ನೋಡಿಕೊಳ್ಳಲಿ. ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಕರ್ನಾಟಕ ಗೂಂಡಾರಾಜ್ಯ ಆಗಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಕಾಲದಲ್ಲಿ ರೇವ್ ಪಾರ್ಟಿ, ಸಚಿವರ ಚುಂಬನಗಳ ದೃಶ್ಯ ಹೊರಬಂದಿದ್ದವು. ಇದಕ್ಕಿಂತ ನಾಚಿಕೆ ಇನ್ನೇನಿದೆ. ರಾಜ್ಯದಲ್ಲಿ ನಡೆದಿರುವ 23 ಕೊಲೆಗಳಲ್ಲಿ 14 ಹಿಂದುಗಳ ನಡುವೆಯೇ ನಡೆದಿದೆ. ಉಳಿದವು ವೈಯಕ್ತಿಕ ಕಾರಣಕ್ಕೆ ನಡೆದಿದೆ. ಸತ್ಯ ಮುಚ್ಚಿಟ್ಟು ತಪ್ಪು ಸಂದೇಶ ತಲುಪಿಸುವ ಪ್ರಯತ್ನ ಬಿಜೆಪಿಯವರು ಮಾಡುತ್ತಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.