ಬಿಜೆಪಿಯಲ್ಲಿ ಮಹತ್ವದ ಬದಲಾವಣೆ, ಬಿಎಲ್ ಸಂತೋಷ್‌ಗೆ ಹೊಸ ಹುದ್ದೆ ನೀಡಿದ ಶಾ

By Web DeskFirst Published Jul 14, 2019, 6:39 PM IST
Highlights

ಒಂದು ಕಡೆ ದೋಸ್ತಿ ಸರರ್ಕಾರದ ಅಳುವು ಉಳಿವಿನ ಪ್ರಶ್ನೆ ಎದ್ದಿದ್ದು ಶಾಸಕರ ರಾಜೀನಾಮೆ ಕಾನೂನು ವ್ಯಾಪ್ತಿಗೆ ಹೋಗಿ ಕುಳೀತುಕೊಂಡಿದೆ. ಇದೆಲ್ಲದರ ನಡುವೆ ಬಿಜೆಪಿಯಲ್ಲೊಂದು ಮಹತ್ವದ ಬದಲಾವಣೆಯಾಗಿದೆ.

ಬೆಂಗಳೂರು[ಜು. 14] ಬಿಜೆಪಿಯಲ್ಲೊಂದು ಮಹತ್ವದ ಬದಲಾವಣೆಯಾಗಿದೆ.  ಬಿ.ಎಲ್. ಸಂತೋಷ್ ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ದಕ್ಷಿಣ ಭಾರತದ ಬಿಜೆಪಿ ಸಂಘಟನಾ ಕಾರ್ಯದರ್ಶಿಯಾಗಿದ್ದ ಬಿ.ಎಲ್. ಸಂತೋಷ್ ಅವರನ್ನು ರಾಷ್ಟ್ರೀಯ ಕಾರ್ಯದರ್ಶಿಯಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇಮಕ ಮಾಡಿದ್ದಾರೆ.

ದಕ್ಷಿಣ ಭಾರತದ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದ ಸಂತೋಷ್ ಇನ್ನು ಮುಂದೆ ಇಡೀ ದೇಶದ ವ್ಯಾಪ್ತಿಯಲ್ಲಿ ಕೆಲಸ ಮಾಡಲಿದ್ದಾರೆ. ಬಿ ಎಲ್ ಸಂತೋಷ್ ಅವರನ್ನು ಸಂಪೂರ್ಣವಾಗಿ ಕರ್ನಾಟಕ ರಾಜಕಾರಣಕ್ಕೆ ಕರೆದುಕೊಂಡು ಬರಲಾಗುತ್ತದೆ ಎಂಬ ಮಾತುಗಳು  ಕೇಳಿಬಂದಿದ್ದವು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಂತೋಷ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

 

 

click me!