ಹಣೆಯಲ್ಲಿ ಗಾಯ, ಮೂಗಿನಲ್ಲಿ ರಕ್ತ : ಹಲವು ಅನುಮಾನ

Published : Aug 01, 2019, 07:31 AM ISTUpdated : Aug 01, 2019, 10:59 AM IST
ಹಣೆಯಲ್ಲಿ ಗಾಯ, ಮೂಗಿನಲ್ಲಿ ರಕ್ತ : ಹಲವು ಅನುಮಾನ

ಸಾರಾಂಶ

ಕಾಫಿ ದೊರೆ ಸಿದ್ಧಾರ್ಥ ಅವರ ಸಾವು ಸಂಭವಿಸಿದೆ. ಆದರೆ ಅವರ ಸಾವಿನ ಹಿಂದೆ ಇನ್ನೂ ಕೂಡ ಹಲವು ರೀತಿಯ ಅನುಮಾನಗಳೂ ಇನ್ನೂ ಇದೆ. 

ಮಂಗಳೂರು [ಆ.1]:  ಸೋಮವಾರ ಸಂಜೆ ಉಳ್ಳಾಲದ ನೇತ್ರಾವತಿ ಸೇತುವೆ ಬಳಿಯಿಂದ ನಾಪತ್ತೆಯಾಗಿ, ಹೊಯ್ಗೆ ಬಜಾರ್‌ ಹಿನ್ನೀರಿನಲ್ಲಿ ಬುಧವಾರ ಬೆಳಗ್ಗೆ ಶವವಾಗಿ ಪತ್ತೆಯಾದ ಕಾಫಿ ಉದ್ಯಮಿ ಸಿದ್ಧಾರ್ಥ ಶವದ ಹಣೆಯಲ್ಲಿ ಗಾಯದ ಗುರುತು, ಮೂಗಿನಲ್ಲಿ ರಕ್ತ ಸೋರಿಕೆ ಆಗಿರುವುದು ಕಂಡುಬಂದಿದೆ. ಇದು ಅನೇಕ ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಅವರು ಧರಿಸಿದ್ದ ಟೀ-ಶರ್ಟ್‌ ಮೈ ಮೇಲೆ ಇಲ್ಲದಿರುವುದು ಈ ಅನುಮಾನಕ್ಕೆ ಮತ್ತಷ್ಟುಪುಷ್ಟಿನೀಡಿದೆ. ಸಿದ್ಧಾರ್ಥ ಸಾವಿನ ಕುರಿತು ಹಲವು ಪ್ರಶ್ನೆಗಳು ಉದ್ಭವಿಸಿದ್ದು, ಮರಣೋತ್ತರ ಪರೀಕ್ಷೆ ಬಳಿಕವೇ ಇವುಗಳಿಗೆ ಉತ್ತರ ಲಭಿಸಲಿದೆ.

ಸಿದ್ಧಾರ್ಥ ಅವರ ಹಣೆಯ ಮೇಲೆ ಹೇಗೆ ಗಾಯ ಆಯಿತು ಎಂಬ ಬಗ್ಗೆ ಖಚಿತ ಮಾಹಿತಿ ಸಿಗುತ್ತಿಲ್ಲ. ಮೇಲ್ನೋಟಕ್ಕೆ ಸಿದ್ಧಾರ್ಥ ಅವರು ಸೇತುವೆಯಿಂದ ಕೆಳಮುಖವಾಗಿ ನದಿಗೆ ಧುಮುಕಿದ ವೇಳೆ ಹಣೆಗೆ ಗಾಯವಾಗಿರಬೇಕು ಎಂದು ಊಹಿಸಲಾಗಿದೆ. ಆದರೆ, ಕೆಳಮುಖವಾಗಿ ನೀರಿಗೆ ಧುಮುಕಿದಾಗ ಈ ರೀತಿ ಗಾಯವಾಗುವ ಸಾಧ್ಯತೆ ಇರುವುದಿಲ್ಲ ಎನ್ನುತ್ತಾರೆ ಈಜು ತಜ್ಞರು. ಹಾಗಾಗಿ ಶವದ ಮರಣೋತ್ತರ ಪರೀಕ್ಷೆ ವರದಿ ಬಳಿಕವೇ ಈ ಪ್ರಶ್ನೆಗಳಿಗೆ ಉತ್ತರ ಲಭಿಸಲಿದ್ದು, ಅಲ್ಲಿಯ ತನಕ ಕಾಯಬೇಕಾಗಿದೆ.

ಟೀ-ಶರ್ಟ್‌ ಇರಲಿಲ್ಲ:  ಸಿದ್ಧಾರ್ಥ ಶವ ಪತ್ತೆಯಾದ ಸಂದರ್ಭದಲ್ಲಿ ಮೈ ಮೇಲೆ ಅವರು ಧರಿಸಿದ್ದ ಟೀ-ಶರ್ಟ್‌ ಇರಲಿಲ್ಲ. ಆದರೆ, ಕಪ್ಪು ಪ್ಯಾಂಟ್‌, ಕಪ್ಪು ಶೂ ಹಾಗೆಯೇ ಇತ್ತು. ಎಡಗೈಯಲ್ಲಿ ಸ್ಮಾರ್ಟ್‌ ವಾಚ್‌, ಬಲಗೈಯಲ್ಲಿ ಎರಡು ಉಂಗುರ ಮಾತ್ರ ಇದ್ದವು. ಮೊಬೈಲ್‌, ಟೀ ಶರ್ಟ್‌ ಕಂಡುಬಂದಿರಲಿಲ್ಲ. ಹೀಗೆ ಟೀ-ಶರ್ಟ್‌ ಇಲ್ಲದಿರುವುದು ಮತ್ತಷ್ಟುಸಂಶಯಕ್ಕೆ ಕಾರಣವಾಗಿದೆ.

ಆದರೆ, ಮೊಬೈಲ್‌ ಸಿದ್ಧಾರ್ಥ ಪ್ಯಾಂಟ್‌ ಜೇಬಿನಲ್ಲಿ ಸಿಕ್ಕಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೊಬೈಲ್‌ನ್ನು ಸ್ವಿಚ್‌ ಆಫ್‌ ಮಾಡಿ ಪ್ಯಾಂಟ್‌ನಲ್ಲಿ ಇರಿಸಿದ ಬಳಿಕವೇ ಸಿದ್ಧಾರ್ಥ ನದಿಗೆ ಜಿಗಿದಿರಬೇಕು ಎಂಬುದು ಪೊಲೀಸರ ಅಂಬೋಣ.

ನೀರಿನಲ್ಲಿ ಮುಳುಗಿ 2 ದಿನವಾದ ಕಾರಣ ಶವ ಕೊಳೆಯಲು ಆರಂಭಿಸಿದ್ದು, ಹೊಟ್ಟೆಭಾಗದಲ್ಲಿ ಸ್ವಲ್ಪ ಊದಿಕೊಂಡಿರುವುದು ಕಂಡುಬಂದಿದೆ. ಹಿನ್ನೀರು ತಂಪಾಗಿ ಇದ್ದರೆ ಶವ ಮೇಲೆ ಬರಲು ವಿಳಂಬವಾಗುತ್ತದೆ ಎನ್ನುತ್ತಾರೆ ಶವ ಪತ್ತೆಮಾಡಿದ ಮೀನುಗಾರ ರಿತೇಶ್‌ ಡಿಸೋಜಾ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಡಿಯೋ: ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ಅವಮಾನ: ಶಹಬಾಜ್ ಷರೀಫ್‌ರನ್ನು ನಿರ್ಲಕ್ಷಿಸಿದ ಪುಟಿನ್!
ಯುಎಇ ಕಠಿಣ ಕಾನೂನು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ವೇಶ್ಯಾವಾಟಿಕೆಗೆ ಶಿಕ್ಷೆ ಪ್ರಮಾಣ ಭಾರೀ ಹೆಚ್ಚಳ!