
ಬೀದರ್ [ಜೂನ್.9] : ಇಲ್ಲೊಬ್ಬ ಅಭಿಮಾನಿ ತಮ್ಮ ಮುಖಂಡರಿಗಾಗಿ ರಕ್ತವನ್ನೇ ಹರಿಸಿದ್ದಾನೆ. ಒಂದೆಡೆ ಡಿಸಿಎಂ ಪಟ್ಟಕ್ಕಾಗಿ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ, ಅತೃಪ್ತ ಶಾಸಕ ಎಂ.ಬಿ.ಪಾಟೀಲ್ ಹೋರಾಟ-ತಿರುಗಾಟ ನಡೆಸುತ್ತಾ ಇದ್ದರೆ ಇತ್ತ ಎಂ.ಬಿ.ಪಾಟೀಲರ ಅಭಿಮಾನಿಯೊಬ್ಬ ರಕ್ತವನ್ನೇ ಹರಿಸಿದ್ದಾನೆ.
ಬೀದರ್ ಜಿಲ್ಲೆಯ ಲಿಂಗಾಯತ ಸಮನ್ವಯ ಸಮಿತಿ ಜಿಲ್ಲಾ ಮುಖಂಡ ಬಸವರಾಜ ಭತಮುರ್ಗೆ ಎಂ.ಬಿ.ಪಾಟೀಲರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ 1.50 ಕೋಟಿ ಜನಸಂಖ್ಯೆ ಹೊಂದಿರುವ ಲಿಂಗಾಯತ ಸಮಾಜಕ್ಕೆ ಮೈತ್ರಿ ಸರ್ಕಾರದಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ರಕ್ತದ ಪತ್ರದಲ್ಲಿ ಒತ್ತಾಯ ಮಾಡಿದ್ದಾರೆ.
ಜತೆಗೆ ಲಿಂಗಾಯತ ಸಮಾಜದ ಪ್ರಭಾವಿ ಮುಖಂಡ ಎಂ.ಬಿ. ಪಾಟೀಲ್ ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಬೇಕು. ಲಿಂಗಾಯತ ಸಮಾಜದ 9 ಶಾಸಕರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ.
ಒಟ್ಟಿನಲ್ಲಿ ಹಿಂದೆ ಪ್ರೇಮಿಗಳು ರಕ್ತದಲ್ಲಿ ಪತ್ರ ಬರೆದು ಸುದ್ದಿ ಮಾಡುತ್ತಿದ್ದರೆ ಇಂದು ರಾಜಕಾರಣಿಗಳ ಅಭಿಮಾನಿಗಳು ರಕ್ತದ ಪತ್ರ ಬರೆಯಲು ಮುಂದಾಗಿದ್ದಾರೆ. ಎಂ.ಬಿ.ಪಾಟೀಲರಿಗೆ ಸಚಿವ ಸ್ಥಾನ ಸಿಗತ್ತೋ, ಡಿಸಿಎಂ ಸಿಗತ್ತೋ ಗೊತ್ತಿಲ್ಲ. ಆದರೆ ರಕ್ತದಲ್ಲಿ ಪತ್ರ ಬರೆದ ಮುಖಂಡ ಸುದ್ದಿ ಮಾಡಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.